ಶಿಕ್ಷಕರ ವರ್ಗಾವಣೆ ಕುರಿತಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಏನು ಹೇಳಿದ್ದಾರೆ ನೋಡಿ.
ನಿನ್ನೆಯಷ್ಟೇ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಸಚಿವ ಮಧು ಬಂಗಾರಪ್ಪ..
ಬೆಂಗಳೂರ: ಸನ್ಮಾನ್ಯ ಶ್ರೀ ಮಧು ಬಂಗಾರಪ್ಪರವರು
ಮಾನ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರನ್ನು ಭೇಟಿ ಮಾಡಲಾಯಿತು.
ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ ರವರನ್ನು ಸದಾಶಿವನಗರದ ಅವರ ನಿವಾಸದಲ್ಲಿ ಭೇಟಿ ಮಾಡಿ ಅತ್ಯಂತ ತುರ್ತು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳನ್ನು ಪ್ರಾರಂಭಿಸುವ ಅನಿವಾರ್ಯತೆಯ ಬಗ್ಗೆ ತಿಳಿಸಲಾಯಿತು. ಅತ್ಯಂತ ಸಂತಸದಿಂದ ಮಾತನಾಡಿಸಿದ ಮಾನ್ಯ ಸಚಿವರು ತಕ್ಷಣ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ವರ್ಗಾವಣೆ ಪ್ರಕ್ರಿಯೆಗಳನ್ನು ಪ್ರಾರಂಭಿಸುವುದಾಗಿ ಸ್ಪಷ್ಟವಾಗಿ ತಿಳಿಸಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೂ ಕೂಡ ಈ ವಿಷಯವನ್ನು ತಿಳಿಸಲಾಗಿದ್ದು ಮತ್ತೆ ಮಾನ್ಯ ಮುಖ್ಯಮಂತ್ರಿಗಳಿಗೆ ಭೇಟಿ ಮಾಡಿ ವರ್ಗಾವಣೆ ವಿಷಯವನ್ನು ಪ್ರಾರಂಭಿಸಲು ಚರ್ಚಿಸಲಾಗುವುದು.
ಶಿಕ್ಷಕರ ವರ್ಗಾವಣೆ ಪ್ರಾರಂಭಿಸಲು ಸಂಘಟನೆ ಬದ್ಧತೆಯೊಂದಿಗೆ ತನ್ನ ಕಾರ್ಯವನ್ನು ಮಾಡುತ್ತಿದೆ ಎಂದು ಚಂದ್ರಶೇಖರ ನುಗ್ಲಿಯವರು ತಿಳಿಸಿದ್ದಾರೆ..
ನಿನ್ನಯಷ್ಟೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು..ಇಲಾಖೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವ ಕೆಲಸವನ್ನು ಮಾಡುತ್ತೇನೆ ಎಂದರು…
ಸಾವಿರಾರು ಶಿಕ್ಷಕರು ವರ್ಗಾವಣೆ ನೀರಿಕ್ಷೇಯಲ್ಲಿದ್ದಾರೆ.ಸರಕಾರ ಕೂಡಲೇ ಮೂರು ವರ್ಷಗಳಿಂದ ಆಗದೇ ಇರುವ ವರ್ಗಾವಣೆ ಈ ಭಾರಿಯಾದರು ನಡೆಯುತ್ತಾ ಎಂಬುದನ್ನು ಕಾದು ನೋಡೊಣ..