ಬಾಡಿಗೆದಾರರಿಗೂ ಉಚಿತ ವಿದ್ಯುತ್ : ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ..
ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.
ಬಾಡಿಗೆದಾರರಿಗೂ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುತ್ತದೆ, ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಸಂಪೂರ್ಣ ದಾಖಲೆಗಳನ್ನು ನೀಡಬೇಕು. ಮಾಲೀಕನ ಎಷ್ಟು ಬಾಡಿಗೆ ಮನೆ ಇದೆ ಎಂದು ಘೋಷಿಸಬೇಕು ಹಾಗೂ ಮನೆ ಮಾಲೀಕ ಕಡ್ಡಾಯವಾಗಿ ತೆರಿಗೆ ಕಟ್ಟಿರಬೇಕು. ಇಷ್ಟು ಬಾಡಿಗೆ ಮನೆಗಳಿವೆ, ಇಷ್ಟು ಮನೆಗಳಿಗೆ ನಾನು ಟ್ಯಾಕ್ಸ್ ಕಟ್ಟಿದ್ದೇನೆ ಎಂದು ಮಾಹಿತಿ ನೀಡಬೇಕು. ಒಂದು ವೇಳೆ ತಪ್ಪು ಮಾಹಿತಿ ನೀಡಿದ್ದರೆ ಈ ಯೋಜನೆ ಅನ್ವಯವಾಗುವುದಿಲ್ಲ . ಎಷ್ಟು ವರ್ಷಗಳಿಂದ ಬಾಡಿಗೆ ಕಟ್ಟುತ್ತಿದ್ದೇವೆ. ವಿದ್ಯುತ್ ಬಿಲ್, ಮನೆ ಬಾಡಿಗೆ, ಕರಾರು ಪತ್ರವಿರಬೇಕು. ಎಷ್ಟು ಮನೆ ಇದೆ ಎಂದು ಘೋಷಿಸಿರಬೇಕು. ಬಾಡಿಗೆಗಾರರಿಗೆ ಉಚಿತ ವಿದ್ಯುತ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ನಾಲ್ಕು ಗ್ಯಾರಂಟಿಗಳಿಗೆ ಅಧಿಕೃತ ಆದೇಶವನ್ನು ಕೂಡ ಹೊರಡಿಸಿದೆ. ಹೀಗೆ ಹೊರಡಿಸಿದಂತ ಅಧಿಕೃತ ಆದೇಶದ ಮಾರ್ಗಸೂಚಿಯಲ್ಲಿ ಹಲವು ಷರತ್ತುಗಳನ್ನು ವಿಧಿಸಲಾಗಿದೆ. ಶಕ್ತಿ ಯೋಜನೆ ಗ್ಯಾರಂಟಿ ಜಾರಿಗೂ ಮುನ್ನ ಹಾಗೂ ತಾತ್ವಿಕ ಒಪ್ಪಿಗೆಯನ್ನು ಸಚಿವ ಸಂಪುಟ ಸಭೆಯಲ್ಲಿ ನೀಡಿದ ನಂತ್ರ, ಜೂನ್ 2ರಂದು ನಡೆದಿದ್ದ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಿದ್ದಂತ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಕೂಡ ನೀಡಲಾಗಿತ್ತು. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸಿಎಂ, ಮನೆ ಮಾಲೀಕರು ಸೇರಿದಂತೆ ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದ್ದರು.