Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ! ಮಕ್ಕಳಿಂದ ಮನೆಕೆಲಸ ಮಾಡಿಸಿಕೊಂಡ ಸರ್ಕಾರಿ ಶಿಕ್ಷಕ, ಶಿಕ್ಷಣ ಇಲಾಖೆಯಿಂದ ಗೇಟ್ ಪಾಸ್, ಕೊನೆಗೆ ಪರಾರಿಯಾದ ಶಿಕ್ಷಕ..

Posted on June 18, 2023 By adminpt No Comments on ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ! ಮಕ್ಕಳಿಂದ ಮನೆಕೆಲಸ ಮಾಡಿಸಿಕೊಂಡ ಸರ್ಕಾರಿ ಶಿಕ್ಷಕ, ಶಿಕ್ಷಣ ಇಲಾಖೆಯಿಂದ ಗೇಟ್ ಪಾಸ್, ಕೊನೆಗೆ ಪರಾರಿಯಾದ ಶಿಕ್ಷಕ..
Share to all

ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ! ಮಕ್ಕಳಿಂದ ಮನೆಕೆಲಸ ಮಾಡಿಸಿಕೊಂಡ ಸರ್ಕಾರಿ ಶಿಕ್ಷಕ, ಶಿಕ್ಷಣ ಇಲಾಖೆಯಿಂದ ಗೇಟ್ ಪಾಸ್, ಕೊನೆಗೆ ಪರಾರಿಯಾದ ಶಿಕ್ಷಕ..

ಮದುವೆಯಾಗಿ ಮಕ್ಕಳಿದ್ದರೂ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿದ ಶಿಕ್ಷಕನಿಗೆ ಶಿಕ್ಷಣ ಇಲಾಖೆ ಗೇಟ್ ಪಾಸ್ ನೀಡಿದೆ ನೋಡಿ. ವಿದ್ಯಾರ್ಥಿನಿಯರ ಜೊತೆ ಅನುಚಿತವಾಗಿ (Misbehave) ವರ್ತಿಸಿದ ಶಿಕ್ಷಕ (Teacher). ಮಕ್ಕಳಿಂದ (Students) ಮನೆಕೆಲಸ ಮಾಡಿಸಿದ ಶಿಕ್ಷಕ.. ಮಕ್ಕಳ ದೂರಿನ ಮೇರೆಗೆ ಕ್ರಮ ಕೈಗೊಂಡ ಶಿಕ್ಷಣ ಇಲಾಖೆ. ಅಮಾನತಿನ (Suspend) ಬೆನ್ನಲ್ಲೆ ಪರಾರಿಯಾದ ಶಿಕ್ಷಕ. ಇದು ಸರ್ಕಾರಿ ಶಾಲಾ ಶಿಕ್ಷಕನೊಬ್ಬನ ದುವರ್ತನೆಯ ಕಥೆ.

ಈ ಪೋಟೋದಲ್ಲಿರುವ ವ್ಯಕ್ತಿಯ ಹೆಸರು ಶಾಸ್ತ್ರಿ ಕೃಷ್ಣಮೂರ್ತಿ. ಬಳ್ಳಾರಿ ಜಿಲ್ಲೆಯ ಕುರಗೋಡ್ ತಾಲೂಕಿನ ಯಲ್ಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ‌ ಶಾಲೆಯ ಸಹ ಶಿಕ್ಷಕ. ನಾಲ್ಕೈದು ವರ್ಷಗಳ ಹಿಂದೆಯಷ್ಟೇ ಶಿಕ್ಷಕರಾಗಿ ನೇಮಕಗೊಂಡಿರುವ ಕೃಷ್ಣಮೂರ್ತಿಯ ಕಿತಾಪತಿ ಒಂದಲ್ಲ‌ ಎರಡಲ್ಲ. ಮಕ್ಕಳಿಗೆ ಉತ್ತಮವಾಗಿ ಪಾಠ ಮಾಡಬೇಕಾದ ಈ‌ ಶಿಕ್ಷಕ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತನೆ ಮಾಡೋದು. ಅನುಚಿತವಾಗಿ ನಡೆದುಕೊಂಡಿರುವುದು ಇದೀಗ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲ ಶಾಲೆಯಲ್ಲಿ ಪಾಠ ಮಾಡೋ ಈ ಶಿಕ್ಷಕ ಮನೆಪಾಠದ ನೆಪಮಾಡಿಕೊಂಡು‌ ವಿದ್ಯಾರ್ಥಿನಿಯರಿಗೆ ಮನೆಗೆ ಕರೆಯಿಸಿಕೊಂಡು ಅವರ ಜೊತೆ ಅಸಭ್ಯವಾಗಿ ವರ್ತನೆ ತೋರಿದ್ದಾನೆ. ವಿದ್ಯಾರ್ಥಿಗಳ ಬಳಿ ಮನೆಕೆಲಸ ಮಾಡಿಸಿಕೊಂಡ ದೂರಿನ ಮೇರೆಗೆ ಇದೀಗ ಪರ್ಮನೆಂಟ್ ಆಗಿ ಮನೆಗೆ ಹೋಗಿದ್ದಾನೆ.

ಯಲ್ಲಾಪುರ ಗ್ರಾಮದಲ್ಲೆ ಮನೆ ಮಾಡಿಕೊಂಡಿದ್ದ ಶಾಸ್ತ್ರಿ ಕೃಷ್ಣಮೂರ್ತಿಗೆ ಈಗಾಗಲೇ ಮದುವೆಯಾಗಿ ಮಕ್ಕಳಿದ್ದಾರೆ. ಆದ್ರೆ ಪತ್ನಿ ಮನೆಯಲ್ಲಿ ಇಲ್ಲದ ವೇಳೆಯಲ್ಲಿ ಶಾಲಾ‌ ಮಕ್ಕಳನ್ನ ಮನೆಗೆ ಕರೆಯಿಸಿಕೊಂಡು ಮನೆ ಕೆಲಸ ಮಾಡಿಸಿಕೊಂಡು ಮಕ್ಕಳಿಗೆ ಕಿರುಕುಳ ನೀಡಿ ಅನುಚಿತವಾಗಿ ವರ್ತನೆ ತೋರಿದ್ದಾನೆ.

ಶಾಲಾ ಮಕ್ಕಳು ಗಟ್ಟಿ ಮನಸ್ಸು ಮಾಡಿ ಪೋಷಕರು ಮತ್ತು ಎಸ್ ಡಿಎಂಸಿ ಬಳಿ ದೂರು ಹೇಳಿದ ಬಳಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿದ ವೇಳೆ ಶಿಕ್ಷಕ ಕೃಷ್ಣಮೂರ್ತಿಯ ಕಿತಾಪತಿ ಬಯಲಿಗೆ ಬಂದಿದೆ. ವಿದ್ಯಾರ್ಥಿಗಳ ದೂರಿನ ಮೇರೆಗೆ ಶಿಕ್ಷಣ ಇಲಾಖೆಯು ಶಿಕ್ಷಕ‌ ಕೃಷ್ಣಮೂರ್ತಿಯನ್ನ ಅಮಾನತು ಮಾಡಿ, ಇಲಾಖೆ ವಿಚಾರಣೆ ಕಾಯ್ದಿರಿಸಿದೆ. ಆದ್ರೆ ತನ್ನ ಮೇಲೆ ಆರೋಪ ಬರುತ್ತಿದ್ದಂತೆ ಶಿಕ್ಷಕ ಕೃಷ್ಣಮೂರ್ತಿ ಯಾರ ಕೈಗೂ ಸಿಗದೇ ಪರಾರಿಯಾಗಿದ್ದಾನೆ.

ಮಕ್ಕಳಿಗೆ ಸರಿಯಾಗಿ ಪಾಠ ಮಾಡಬೇಕಾದ ಶಿಕ್ಷಕ ಕೃಷ್ಣಮೂರ್ತಿಯೇ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳ ಜೊತೆ ಅಸಭ್ಯವಾಗಿ ವರ್ತಿಸಿರುವುದು ಇಡಿ ಶಿಕ್ಷಕ ವೃಂದಕ್ಕೆ ಕಪ್ಪುಚುಕ್ಕೆ ತಂದಿದೆ. ಹೀಗಾಗಿ ಶಿಕ್ಷಣ ಇಲಾಖೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಶಿಕ್ಷಕನಿಗೆ ಗೇಟ್ ಪಾಸ್ ನೀಡಿದೆ.

P Views: 44
ಮುಖ್ಯಾಂಶಗಳು Tags:ಕೊನೆಗೆ ಪರಾರಿಯಾದ ಶಿಕ್ಷಕ.., ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ! ಮಕ್ಕಳಿಂದ ಮನೆಕೆಲಸ ಮಾಡಿಸಿಕೊಂಡ ಸರ್ಕಾರಿ ಶಿಕ್ಷಕ, ಶಿಕ್ಷಣ ಇಲಾಖೆಯಿಂದ ಗೇಟ್ ಪಾಸ್

Post navigation

Previous Post: ಸವದತ್ತಿ ತಾಲೂಕು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳು
Next Post: ಕಾಂಗ್ರೆಸ್ ನಿಂದ ಮುಂದುವರೆದ ದೋಖಾ ಸಿರೀಸ್: ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ‌ ವಾಗ್ದಾಳಿ ಜುಲೈನಲ್ಲಿ 10 ಕೆ.ಜಿ ಅಕ್ಕಿ ನೀಡದಿದ್ದರೆ ಸರ್ಕಾರದ ವಿರುದ್ಧ ಹೋರಾಟ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme