Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ 22 ನೇ ಅವಧಿಗೆ ಮಹಾಪೌರರಾಗಿ ವೀಣಾ ಚೇತನ ಬರದ್ವಾಡ ಹಾಗೂ ಉಪಮಹಾಪೌರರಾಗಿ ಸತೀಶ ಸುರೇಂದ್ರ ಹಾನಗಲ್ ಆಯ್ಕೆ ಆಗಿದ್ದಾರೆ: ಫಲಿತಾಂಶ ಘೋಷಿಸಿದ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ

Posted on June 20, 2023June 20, 2023 By Pulic Today No Comments on ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ 22 ನೇ ಅವಧಿಗೆ ಮಹಾಪೌರರಾಗಿ ವೀಣಾ ಚೇತನ ಬರದ್ವಾಡ ಹಾಗೂ ಉಪಮಹಾಪೌರರಾಗಿ ಸತೀಶ ಸುರೇಂದ್ರ ಹಾನಗಲ್ ಆಯ್ಕೆ ಆಗಿದ್ದಾರೆ: ಫಲಿತಾಂಶ ಘೋಷಿಸಿದ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ
Share to all

ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ 22 ನೇ ಅವಧಿಗೆ ಮಹಾಪೌರರಾಗಿ ವೀಣಾ ಚೇತನ ಬರದ್ವಾಡ ಹಾಗೂ ಉಪಮಹಾಪೌರರಾಗಿ ಸತೀಶ ಸುರೇಂದ್ರ ಹಾನಗಲ್ ಆಯ್ಕೆ ಆಗಿದ್ದಾರೆ: ಫಲಿತಾಂಶ ಘೋಷಿಸಿದ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ

ಧಾರವಾಡ .20; ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ 22 ನೆ ಅವಧಿಗೆ ಮಹಾಪೌರರಾಗಿ 49 ನೇ ವಾರ್ಡ್ ಸದಸ್ಯೆ ವೀಣಾ ಚೇತನ ಬರದ್ವಾಡ ಅವರು ಅತಿ ಹೆಚ್ಚು (46) ಮತಗಳನ್ನು ಪಡೆದು ಆಯ್ಕೆ ಆಗಿದ್ದಾರೆ ಮತ್ತು ಪಾಲಿಕೆಯ 32 ನೇ ವಾರ್ಡ್ ಸದಸ್ಯ ಸತೀಶ ಸುರೇಂದ್ರ ಹಾನಗಲ್ ಅವರು ಉಪಮಹಾಪೌರರಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾ ಅಧ್ಯಕ್ಷಾಧಿಕಾರಿ ಆಗಿದ್ದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ಅವರು ಪ್ರಕಟಿಸಿದರು.
ಮಹಾಪೌರ ಮತ್ತು ಉಪ ಮಹಾಪೌರ ಚುನಾವಣೆಯಲ್ಲಿ ಸದಸ್ಯರು ಕೈ ಎತ್ತುವ ಮೂಲಕ ತಮ್ಮ ಮತ ಚಲಾಯಿಸಿದರು.
ಮಹಾಪೌರ ಸ್ಥಾನಕ್ಕೆ ಸ್ಪರ್ಧಿಸಿದ್ದ ಮಹಾನಗರಪಾಲಿಕೆಯ 59 ನೆ ವಾರ್ಡ್ ಸದಸ್ಯೆ ಸುವರ್ಣಾ ಕಲ್ಲಕುಂಟಲಾ ಅವರು 37 ಮತಗಳನ್ನು ಮತ್ತು ಮಹಾನಗರಪಾಲಿಕೆಯ 76 ನೇ ವಾರ್ಡ್ ಸದಸ್ಯೆ ವಹೀದಾಖಾನಂ ಅಲ್ಲಾಭಕ್ಷ ಕಿತ್ತೂರ ಅವರು 03 ಮತಗಳನ್ನು ಪಡೆದಿದ್ದಾರೆ ಎಂದು ಅವರು ಪ್ರಕಟಿಸಿದರು.
ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ 22 ನೇ ಅವಧಿಗೆ ಉಪಮಹಾಪೌರರಾಗಿ ಪಾಲಿಕೆಯ 32 ನೇ ವಾರ್ಡ್ ಸದಸ್ಯ ಸತೀಶ ಸುರೇಂದ್ರ ಹಾನಗಲ್ ಅವರು ಅತಿ ಹೆಚ್ಚು (46) ಮತಗಳನ್ನು ಪಡೆಯುವ ಮೂಲಕ ಆಯ್ಕೆ ಆಗಿದ್ದಾರೆ ಎಂದು ಅವರು ತಿಳಿಸಿದರು.


ಮಹಾಪೌರ ಸ್ಥಾನಕ್ಕೆ ಸ್ಪರ್ಧಿಸಿದ್ದ ಮಹಾನಗರಪಾಲಿಕೆಯ 04 ವಾರ್ಡ್ ಸದಸ್ಯ ರಾಜಶೇಖರ ಕಮತಿ ಅವರು 37 ಮತಗಳನ್ನು ಪಡೆದಿದ್ದಾರೆ ಮತ್ತು ಇನ್ನೊರ್ವ ಸ್ಪರ್ಧಾಳು ಪಾಲಿಕೆಯ 71 ವಾರ್ಡ್ ಸದಸ್ಯ ನಜೀರ ಅಹ್ಮದ ಮೆಹಬೂಬಸಾಬ ಹೊನ್ಯಾಳ ಅವರು 03 ಮತಗಳನ್ನು ಪಡೆದಿದ್ದಾರೆ ಎಂದು ಪ್ರಕಟಿಸಿದರು.
ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ ಮಹಾಪೌರ ಮತ್ತು ಉಪಮಹಾಪೌರ ಚುನಾವಣೆಗೆ ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 89 ಜನ ಮತದಾರರು ಇದ್ದು, ಇಂದಿನ ಮಹಾಪೌರ ಮತ್ತು ಉಪಮಹಾಪೌರ ಚುನಾವಣೆಯಲ್ಲಿ 86 ಜನರು ಪಾಲ್ಗೊಂಡಿದ್ದರು. ಮತ್ತು ವಿಧಾನ ಪರಿಷತ್ತು ಸದಸ್ಯರಾಗಿರುವ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಶಾಸಕರಾದ ವಿನಯ ಕುಲಕರ್ಣಿ ಮತ್ತು ಮಹಾನಗರಪಾಲಿಕೆಯ 54 ನೇ ವಾರ್ಡ ಸದಸ್ಯೆ ಸರಸ್ವತಿ ದೊಂಗಡಿ ಅವರು ಗೈರುಹಾಜರಾಗಿದ್ದರು.

P Views: 198
ಮುಖ್ಯಾಂಶಗಳು Tags:ಹುಬ್ಬಳ್ಳಿ ಧಾರವಾಡ ಮಹಶನಗರಪಾಲಿಕೆಯ 22 ನೇ ಅವಧಿಗೆ ಮಹಾಪೌರರಾಗಿ ವೀಣಾ ಚೇತನ ಬರದ್ವಾಡ ಹಾಗೂ ಉಪಮಹಾಪೌರರಾಗಿ ಸತೀಶ ಸುರೇಂದ್ರ ಹಾನಗಲ್ ಆಯ್ಕೆ ಆಗಿದ್ದಾರೆ: ಫಲಿತಾಂಶ ಘೋಷಿಸಿದ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ

Post navigation

Previous Post: ಶಿಕ್ಷಣ ಕ್ಷೇತ್ರಕ್ಕೆ ಕಳೆದ ಹತ್ತು ವರ್ಷದಿಂದ ಅನುದಾನ ಕಡಿತ:ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ.. ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬದಲಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ
Next Post: ರಾಜ್ಯ ಸರಕಾರಿ ನೌಕರರಿಗೆ ಮಹತ್ವದ ಮಾಹಿತಿ:

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme