ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಸರ್ಕಾರಿ ಶಾಲೆಗಳಿಗಾಗಿಯೇ ಪ್ರತ್ಯೇಕ ಶಾಲಾ ಅನುದಾನವನ್ನು 14ನೇ ಬಜೆಟ್ ನಲ್ಲಿ ಮೀಸಲಿಟ್ಟು ಸರ್ಕಾರಿ ಶಾಲೆಗಳಿಗೆ ಪಟ್ಟಿ ತುಂಬಿದ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ರವರಿಗೆ, ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ರವರಿಗೆ ಹಾಗೂ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ ರವರಿಗೆ ರಾಜ್ಯದ ಸಮಸ್ತ ಶಿಕ್ಷಕರ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧದಿಕಾರಿಗಳು ಸಲ್ಲಿಸಿದ್ದಾರೆ..
ಬೆಂಗಳೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ದಿನಾಂಕ: 15-06-2023ರಂದು ಕರ್ನಾಟಕ ಘನ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ರವರಿಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಿರಿಯ ಪ್ರಾಥಮಿಕ ಶಾಲೆಗಳಿಗೆ 25000/- ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಿಗೆ 50000/- ಒಟ್ಟು ಪ್ರತ್ಯೇಕವಾಗಿ 163 ಕೋಟಿ ರೂಪಾಯಿಗಳ ಶಾಲಾ ಅನುದಾನವನ್ನು ಬಜೆಟ್ನಲ್ಲಿ ಘೋಷಿಸುವಂತೆ ಮನವಿ ಮಾಡಿದ್ದು, ಸದರಿ ಮನವಿಗೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳು ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ 153 ಕೋಟಿ ರೂಪಾಯಿಗಳನ್ನು ಇತಿಹಾಸದಲ್ಲೇ ಪ್ರಥಮ ಬಾರಿಗೆ ಬಜೆಟ್ನಲ್ಲಿ ಪ್ರತ್ಯೇಕವಾಗಿ ಘೋಷಿಸಿದ್ದು, ಸರ್ಕಾರಿ ಶಾಲೆಗಳಿಗೆ ಶಕ್ತಿಯನ್ನು ತುಂಬುವುದರ ಜೊತೆಗೆ ರಾಜ್ಯದ ಸರ್ಕಾರಿ ಶಾಲೆಗಳಿಗೆ 20 ಸಾವಿರದಿಂದ 45 ಸಾವಿರದವರೆಗೆ ಅನುದಾನ ಹೆಚ್ಚಿಸಿ ಬಜೆಟ್ನಲ್ಲಿ ಘೋಷಿಸಿದ್ದಾರೆ.
– ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಯೋಜನೆಯನ್ನು 10ನೇ ತರಗತಿವರೆಗೆ ವಿಸ್ತರಿಸಿ ಬಜೆಟ್ನಲ್ಲಿ ಘೋಷಿಸಿದ್ದಾರೆ. ಈ ಸರ್ಕಾರಿ ಶಾಲೆಗಳನ್ನು ನಂದನವನ ಮಾಡುವ ದೃಷ್ಟಿಯಿಂದ ರಾಜ್ಯದ ಸರ್ಕಾರಿ ಶಾಲೆಗಳ ಸುತ್ತ ಮೈದಾನದಲ್ಲಿ 50ಲಕ್ಷ ಸಸಿ ನೆಡುವ ಮೂಲಕ ಪರಿಸರ ಪ್ರಜ್ಞೆ ಬೆಳೆಸುವ ಸಸ್ಯ
ಶ್ಯಾಮಲಾ ಯೋಜನೆ ಘೋಷಿಸಿದ್ದಾರೆ.
8300 ಘೋಷಿಸಿದ್ದಾರೆ.
ಕೊಠಡಿಗಳ ಹಾಗೂ ಶೌಚಾಲಯಗಳ ನಿರ್ಮಾಣಕ್ಕೆ ಅನುದಾನ
– ಶಾಲೆಗಳಲ್ಲಿ ತಂತ್ರಜ್ಞಾನ ಅಳವಡಿಸಲು ವಿನೂತನ ಯೋಜನೆಗಳನ್ನು ಘೋಷಿಸಿದ್ದಾರೆ.
– ಕಲಿಕಾ ನ್ಯೂನತೆ ಹೋಗಲಾಡಿಸಲು ಬಜೆಟ್ ನಲ್ಲಿ 80 ಕೋಟಿ ಘೋಷಿಸಿದ್ದಾರೆ.
SATS-1 ರಲ್ಲಿ ಆಗುತ್ತಿರುವ ತೊಂದರೆ ನಿವಾರಿಸಲು SATS-2 ಮುಂದುವರೆದ
ತಂತ್ರಜ್ಞಾನ ಅಳವಡಿಸಲು ಘೋಷಿಸಿದ್ದಾರೆ.
ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ 153 ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಪ್ರಥಮ ಬಾರಿಗೆ ಪ್ರತ್ಯೇಕವಾಗಿ ಮೀಸಲಿಟ್ಟ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ರವರಿಗೆ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ರವರಿಗೆ ಹಾಗೂ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ ರವರಿಗೆ ರಾಜ್ಯದ ಸಮಸ್ತ ಶಿಕ್ಷಕರ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ.
ಇದನ್ನು ತಮ್ಮ ಹೆಸರಾಂತ ದಿನಪತ್ರಿಕೆಯಲ್ಲಿ ಪ್ರಕಟಿಸಿ ವ್ಯಾಪಕ ಪ್ರಚಾರಗೊಳಿಸಬೇಕೆಂದು
ತಮ್ಮಲ್ಲಿ ಈ ಮೂಲಕ ವಿನಂತಿಸಿಕೊಳ್ಳುತ್ತೇವೆ.
ವಂದನೆಗಳೊಂದಿಗೆ
ತಮ್ಮ ವಿಶ್ವಾಸಿಗಳು,
(ಕೆ.ನಾಗೇಶ) ಅಧ್ಯಕ್ಷರು
(ಚಂದ್ರಶೇಖರ ನುಗ್ಗಲಿ) ಪ್ರಧಾನ ಕಾರ್ಯದರ್ಶಿ