Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

42 ವರ್ಷ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಾ ನಿವೃತ್ತಿ ಅಂಚಿನಲ್ಲಿರುವ ಶಿಕ್ಷಕಿಯಿಂದ 20ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ… ಶಾಲೆಯ ಸಂಚಾಲಕಿ ಐದು ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ.

Posted on July 7, 2023July 7, 2023 By Pulic Today No Comments on 42 ವರ್ಷ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಾ ನಿವೃತ್ತಿ ಅಂಚಿನಲ್ಲಿರುವ ಶಿಕ್ಷಕಿಯಿಂದ 20ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ… ಶಾಲೆಯ ಸಂಚಾಲಕಿ ಐದು ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ.
Share to all

42 ವರ್ಷ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಾ ನಿವೃತ್ತಿ ಅಂಚಿನಲ್ಲಿರುವ ಶಿಕ್ಷಕಿಯಿಂದ 20ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ…

ಶಾಲೆಯ ಸಂಚಾಲಕಿ ಐದು ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ…

ಮಂಗಳೂರು: ವಯೋ ನಿವೃತ್ತಿ ಹೊಂದಲಿರುವ ಮುಖ್ಯ ಶಿಕ್ಷಕಿಗೆ ನಿವೃತ್ತಿ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಲು 20 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಅನುದಾನಿತ ಶಾಲೆಯ ಸಂಚಾಲಕಿ ಐದು ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಮಂಗಳೂರು ತಾಲೂಕಿನ ಬಜ್ಪೆ ಸುಂಕದಕಟ್ಟೆಯಲ್ಲಿರುವ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಠಾನಕ್ಕೆ ಸೇರಿದ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೋಭಾರಾಣಿ ಎಂಬುವರು ಶಿಕ್ಷಕಿ ಹಾಗೂ ಸದ್ಯ ಮುಖ್ಯ ಶಿಕ್ಷಕಿಯಾಗಿ 42 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಜುಲೈ 31ರಂದು ವಯೋನಿವೃತ್ತಿ ಹೊಂದಲಿದ್ದಾರೆ. ಅವರು ತಮ್ಮ ವಯೋನಿವೃತ್ತಿ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸುವಂತೆ ಮೇ 25ರಂದು ಶಾಲೆಯ ಮ್ಯಾನೇಜ್‌ಮೆಂಟ್‌ನ ಸಂಚಾಲಕರಾದ ಜ್ಯೋತಿ ಎನ್. ಪೂಜಾರಿ ಅವರಿಗೆ ಮನವಿ ಪತ್ರದೊಂದಿಗೆ ವಿನಂತಿಸಿಕೊಂಡು ಸ್ವೀಕೃತಿಯನ್ನು ನೀಡುವಂತೆ ಕೋರಿದ್ದರು.

ಆದರೆ ಸಂಚಾಲಕರಾದ ಜ್ಯೋತಿ.ಎನ್. ಪೂಜಾರಿ ಅವರು ಸ್ವೀಕೃತಿಯನ್ನು ನಂತರ ನೀಡುವುದಾಗಿ ತಿಳಿಸಿ, ಪಿಂಚಣಿ ಉಪದಾನ ಪತ್ರಗಳನ್ನು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸದೇ, ಸ್ವೀಕೃತಿ ಪತ್ರವನ್ನು ನೀಡದೇ ಶೋಭಾರಾಣಿ ಅವರಿಗೆ ಸತಾಯಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಿ ಕಳುಹಿಸಬೇಕಾದರೆ ರೂಪಾಯಿ 20 ಲಕ್ಷ ಲಂಚ ಹಣ ಕೊಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಆ ನಂತರ ಪುನಃ ಶೋಭಾರಾಣಿ ಅವರು ಜುಲೈ 5ರಂದು ವಾಪಸ್​​ ಮ್ಯಾನೇಜ್‌ಮೆಂಟ್‌ನ ಸಂಚಾಲಕರ ವಾಸದ ಮನೆ ಬಳಿ ಹೋಗಿ ಸಂಚಾಲಕರಾದ ಜ್ಯೋತಿ ಎನ್. ಪೂಜಾರಿ ಅವರನ್ನು ಭೇಟಿ ಮಾಡಿ ತನ್ನ ಪಿಂಚಣಿ ದಾಖಲೆ ಪತ್ರಗಳಿಗೆ ಸಹಿ ಮಾಡಿ ಕಳುಹಿಸಿಕೊಡುವಂತೆ ಕೋರಿದ್ದಾರೆ. ಆಗ ಪಿಂಚಣಿ ದಾಖಲೆ ಪತ್ರಗಳಿಗೆ ಸಹಿ ಮಾಡುವಾಗಲೇ ಜ್ಯೋತಿ ಅವರು 5 ಲಕ್ಷ ರೂಪಾಯಿ ಕೊಡುವಂತೆ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಗುರುವಾರ ಶಾಲೆಯ ಮ್ಯಾನೇಜ್‌ಮೆಂಟ್‌ನ ಸಂಚಾಲಕಿ ಜ್ಯೋತಿ ಅವರು ಶೋಭಾರಾಣಿರಿಂದ 5 ಲಕ್ಷ ರೂಪಾಯಿ ಹಣವನ್ನು ಲಂಚವಾಗಿ ಸ್ವೀಕರಿಸುವಾಗ ಸ್ಥಳದಲ್ಲಿಯೇ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿ ಜ್ಯೋತಿ ಎನ್ ಪೂಜಾರಿಯನ್ನು ಬಂಧಿಸಿರುವ ಲೋಕಾಯುಕ್ತ ಅಧಿಕಾರಿಗಳು, ಲಂಚದ ಹಣ ವಶಪಡಿಸಿಕೊಂಡು ವಿಚಾರಣೆ ಕೈಗೊಂಡಿದ್ದಾರೆ.

ಮಂಗಳೂರು ಲೋಕಾಯುಕ್ತ ಎಸ್​ಪಿ ಸಿ.ಎ. ಸೈಮನ್ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರುಗಳಾದ ಕಲಾವತಿ. ಕೆ, ಚಲುವರಾಜು ಬಿ. ಹಾಗೂ ಪೊಲೀಸ್ ನಿರೀಕ್ಷಕರಾದ ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು.

P Views: 741
Headlines, ಮುಖ್ಯಾಂಶಗಳು, ರಾಷ್ರ್ಟೀಯ, ಶಿಕ್ಷಣ Tags:42 ವರ್ಷ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಾ ನಿವೃತ್ತಿ ಅಂಚಿನಲ್ಲಿರುವ ಶಿಕ್ಷಕಿಯಿಂದ 20ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ... ಶಾಲೆಯ ಸಂಚಾಲಕಿ ಐದು ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ.

Post navigation

Previous Post: ಮಹಿಳೆಯರು ಬಹು ನಿರೀಕ್ಷೆಯಿಂದ ನೋಡುತ್ತಿರುವಂತ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಆಗಿದೆ.
Next Post: ಅಮೀಬಾಗೆ ಬಲಿಯಾದ ಹತ್ತನೇ ತರಗತಿ ವಿದ್ಯಾರ್ಥಿ ಗುರುದತ್

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..
  • ಜೋಕುಮಾರನ ಆಗಮನ ಕುರಿತು ಶಿಕ್ಷಕ ಸಾಹಿತಿ ವೈ ಬಿ ಕಡಕೋಳ ಅವರ ಲೇಖನ

Copyright © 2023 Public Today.

Powered by PressBook WordPress theme