ನಾಳೆ ಮೂರು ತಾಲೂಕುಗಳಲ್ಲಿನ ಶಾಲೆಗಳಿಗೆ ರಜೆ ಘೋಷಣೆ..
ರಾಜ್ಯದಲ್ಲಿ ಮುಂದುವರೆದ ಮಳೆ: ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ..
ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದುಕೊಂಡು ತಮ್ಮ ಶಾಲೆಗಳಿಗೆ ರಜೆ ನೀಡಲಾಗಿದೇಯೆ ಎಂಬುದನ್ನು ಖಚಿತ ಪಡಿಸಕೊಳ್ಳಿ…
ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನರಿಗೆ ಮುಂಜಾಗ್ರತಾ ಕ್ರಮವಾಗಿ ಗ್ರಾಮವನ್ನು ತೊರೆದು ಗಂಜಿ ಕೇಂದ್ರಗಳಿಗೆ ತೆರಳುವಂತೆ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ನೀತಿಶ ಪಾಟೀಲ ತಿಳಿಸಿದ್ದಾರೆ..
ಬೆಳಗಾವಿ ಹಾಗೂ ಖಾನಾಪೂರ, ಕಿತ್ತೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ ಎಂದು ಡಿಸಿಯವರು ಮಾಹಿತಿ ನೀಡಿದ್ದಾರೆ..ನಾಳೆಯೂ ಕೂಡ ಮಳೆ ಮುಂದುವರೆಯುವ ಸಾದ್ಯತೆ ಇದೆ ಎಂದು ತಿಳಿಸಿದರು…
ಸಂಜೆವರೆಗೂ ನೊಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ನೀತಿಶ ಪಾಟೀಲ ಮಾಹಿತಿ ನೀಡಿದರು…