ಬೆಂಗಳೂರು: ಸ್ವಂತ ಕಾರು ಹೊಂದಿರುವಂತ ಬಿಪಿಎಲ್ ಕಾರ್ಡ್ ಹೊಂದಿರೋದಕ್ಕೆ ಅರ್ಹರಲ್ಲ. ಹೀಗಾಗಿ ಅವರ ಕಾರ್ಡ್ ರದ್ದುಗೊಳಿಸಲಾಗುತ್ತದೆ ಎಂಬುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ಈ ಮೂಲಕ ಸ್ವಂತ ಕಾರು ಹೊಂದಿರುವಂತ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ವಂತ ಕಾರು ಹೊಂದಿರೋರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ, ಹಿಂಪಡೆಯೋ ಚಿಂತನೆ ನಡೆಸಲಾಗಿದೆ. ವೈಟ್ ಬೋರ್ಡ್ ಕಾರು ಇರುವಂತ ಬಿಪಿಎಲ್ ಪಡಿತರರದಾರರ ಕಾರ್ಡ್ ರದ್ದುಗೊಳಿಸಲಾಗುತ್ತದೆ. ಯೆಲ್ಲೋ ಬೋರ್ಡ್ ಹೊಂದಿರುವ ಕಾರು ಇಟ್ಟುಕೊಂಡಿರುವಂತ ಬಿಪಿಎಲ್ ಕಾರ್ಡ್ ಗಳನ್ನು ಹಿಂಪಡೆಯುವಂತ ಚಿಂತನೆಯನ್ನು ನಡೆಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಹೊಸದಾಗಿ ಪಡಿತರ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆಯ ಕಾರಣ ಈವರೆಗೆ ಕಾರ್ಡ್ ವಿತರಿಸಿರಲಿಲ್ಲ. ಈಗ ಹೊಸದಾಗಿ ಅರ್ಜಿ ಸಲ್ಲಿಸಿದಂತ ಅರ್ಹ ಫಲಾನುಭವಿಗಳಿಗೆ ಪಡಿತರ ಕಾರ್ಡ್ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿರೋದಾಗಿ ತಿಳಿಸಿದರು.
ಶೀಘ್ರವೇ ಹೊಸ ಪಡಿತರ ಕಾರ್ಡ್ ಗಾಗಿ ಅರ್ಜಿ ಸಲ್ಲಿಕೆ ಕೂಡ ಆರಂಭಿಸಲಾಗುತ್ತದೆ. ಈಗಾಗಲೇ ಪಡಿತರ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದವರಿಗೂ ಶೀಘ್ರವೇ ಕಾರ್ಡ್ ವಿತರಿಸಲಾಗುತ್ತದೆ ಎಂದು ಹೇಳಿದರು.