Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಬೆಳಗಾವಿ ವಿಭಾಗ ಮಟ್ಟದ ಶಿಕ್ಷಕರ ಚಿತ್ರಕಲಾ ಶಿಬಿರದ ಸಮಾರೋಪದಲ್ಲಿ ಹೆಚ್ಚುವರಿ ಆಯುಕ್ತೆ ಜಯಶ್ರೀ ನುಡಿ ‘ ಪರೀಕ್ಷಾ ಅಕ್ರಮಗಳನ್ನು ಇಲಾಖೆ ಸಹಿಸುವುದಿಲ್ಲ’

Posted on August 9, 2023 By Pulic Today No Comments on ಬೆಳಗಾವಿ ವಿಭಾಗ ಮಟ್ಟದ ಶಿಕ್ಷಕರ ಚಿತ್ರಕಲಾ ಶಿಬಿರದ ಸಮಾರೋಪದಲ್ಲಿ ಹೆಚ್ಚುವರಿ ಆಯುಕ್ತೆ ಜಯಶ್ರೀ ನುಡಿ ‘ ಪರೀಕ್ಷಾ ಅಕ್ರಮಗಳನ್ನು ಇಲಾಖೆ ಸಹಿಸುವುದಿಲ್ಲ’
Share to all

ಬೆಳಗಾವಿ ವಿಭಾಗ ಮಟ್ಟದ ಶಿಕ್ಷಕರ ಚಿತ್ರಕಲಾ ಶಿಬಿರದ ಸಮಾರೋಪದಲ್ಲಿ ಹೆಚ್ಚುವರಿ ಆಯುಕ್ತೆ ಜಯಶ್ರೀ ನುಡಿ

‘ ಪರೀಕ್ಷಾ ಅಕ್ರಮಗಳನ್ನು ಇಲಾಖೆ ಸಹಿಸುವುದಿಲ್ಲ’

ಧಾರವಾಡ : ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ನಕಲು ವಿಧಾನವನ್ನು ಅವಲಂಬಿಸದಂತೆ ಅವರಲ್ಲಿ ಅಧ್ಯಯನದ ಆಸಕ್ತಿಯನ್ನು ಹೆಚ್ಚಿಸಿ ಪಾರದರ್ಶಕ ಪರೀಕ್ಷೆಗಳ ಸಂಘಟನೆಗೆ ಶಿಕ್ಷಕ-ಶಿಕ್ಷಕಿಯರು ಶ್ರಮಿಸಬೇಕು. ಯಾವುದೇ ಸಂದರ್ಭದಲ್ಲಿ ಪರೀಕ್ಷಾ ಅಕ್ರಮಗಳನ್ನು ಇಲಾಖೆಯು ಸಹಿಸುವದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆಯ ಕಿತ್ತೂರು ಕರ್ನಾಟಕ ವಲಯದ ಹೆಚ್ಚುವರಿ ಆಯುಕ್ತೆ ಜಯಶ್ರೀ ಶಿಂತ್ರಿ ಹೇಳಿದರು.

ಅವರು ಶಾಲಾ ಶಿಕ್ಷಣ ಇಲಾಖೆಯ ಮೂಲಕ ‘ನಕಲು ಮುಕ್ತ ಪರೀಕ್ಷೆಗಳ ಸಂಘಟನೆ ಹಾಗೂ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು’ ಎಂಬ ವಿಷಯವಾಗಿ ನಗರದ ಸರಕಾರಿ ಆರ್ಟ ಗ್ಯಾಲರಿಯಲ್ಲಿ ಹಮ್ಮಿಕೊಂಡಿದ್ದ ಪ್ರೌಢ ಶಾಲಾ ಶಿಕ್ಷಕರ ಬೆಳಗಾವಿ ವಿಭಾಗ ಮಟ್ಟದ ಚಿತ್ರಕಲಾ ಶಿಕ್ಷಕರ ಚಿತ್ರಕಲಾಕೃತಿಗಳ ರಚನಾ ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡುತ್ತಿದ್ದರು. ಬಾಹ್ಯಾಕಾಶ ಸಂಶೋಧನೆಯೂ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಭಾರತವು ಮುಂಚೂಣಿಯಲ್ಲಿ ಹೆಜ್ಜೆ ಹಾಕುತ್ತಿದೆ. ಹಾಗಾಗಿ ಭಾರತವು ಉತ್ಕೃಷ್ಟ ಮಾನವ ಸಂಪನ್ಮೂಲವನ್ನು ಅಪೇಕ್ಷಿಸುತ್ತಿದೆ. ಇದಕ್ಕೆ ಪೂರಕವಾಗಿ ಶಾಲಾ ಶಿಕ್ಷಣದ ಬೋಧನೆ ರೂಪುಗೊಳ್ಳಬೇಕು ಎಂದು ಹೇಳಿದ ಶಿಂತ್ರಿ ಅವರು, ಚಿತ್ರಕಲಾ ಶಿಕ್ಷಕರ ಕುಂಚ ಕಲ್ಪನೆಯಲ್ಲಿ ಮೈದಾಳಿದ 100 ಕಲಾಕೃತಿಗಳನ್ನು ವೀಕ್ಷಿಸಿ ಮೆಚ್ಚಿಗೆ ವ್ಯಕ್ತಪಡಿಸಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಂಜೀವ ಬಿಂಗೇರಿ, ಹಿರಿಯ ಚಿತ್ರಕಲಾ ಪರಿವೀಕ್ಷಕ ಪಿ.ಆರ್. ಬಾರಕೇರ, ವೃತ್ತಿ ಶಿಕ್ಷಣದ ಹಿರಿಯ ಸಹಾಯಕ ನಿರ್ದೇಶಕ ಬಿ.ವೈ. ಭಜಂತ್ರಿ, ಸರಕಾರಿ ಚಿತ್ರಕಲಾ ಕಾಲೇಜಿನ ಪ್ರಾಚಾರ್ಯ ಡಾ. ಬಸವರಾಜ ಕುರಿ, ಸಾರ್ವಜನಿಕ ಸಂಪರ್ಕಾಧಿಕಾರಿ ಸುಜಾತಾ ತಿಮ್ಮಾಪೂರ, ಇ-ಆಡಳಿತ ನಿರ್ವಹಣಾಧಿಕಾರಿ ಶಾಂತಾ ಮೀಸಿ ಇದ್ದರು. ಎಸ್.ಎ.ಕೇಸರಿ, ಬಿ.ಎಂ. ಮಾಳಗಿ, ಗೋಪಾಲ ಚಲವಾದಿ ಇತರರು ಕಾರ್ಯಾಗಾರದ ಸಂಘಟನೆಗೆ ನೆರವಾದರು. ಬೆಳಗಾವಿ, ಬಾಗಲಕೋಟ, ವಿಜಯಪೂರ, ಉತ್ತರಕನ್ನಡ, ಧಾರವಾಡ, ಗದಗ, ಹಾವೇರಿ, ಶಿರಸಿ, ಚಿಕ್ಕೋಡಿ ಜಿಲ್ಲೆಗಳ ಸರಕಾರಿ ಮತ್ತು ಅನುದಾನಿತ ಪ್ರೌಢ ಶಾಲೆಗಳ 50 ಚಿತ್ರಕಲಾ ಶಿಕ್ಷಕರು ಪಾಲ್ಗೊಂಡಿದ್ದರು.

P Views: 430
Headlines, ಮುಖ್ಯಾಂಶಗಳು, ಶಿಕ್ಷಣ Tags:ಬೆಳಗಾವಿ ವಿಭಾಗ ಮಟ್ಟದ ಶಿಕ್ಷಕರ ಚಿತ್ರಕಲಾ ಶಿಬಿರದ ಸಮಾರೋಪದಲ್ಲಿ ಹೆಚ್ಚುವರಿ ಆಯುಕ್ತೆ ಜಯಶ್ರೀ ನುಡಿ ‘ ಪರೀಕ್ಷಾ ಅಕ್ರಮಗಳನ್ನು ಇಲಾಖೆ ಸಹಿಸುವುದಿಲ್ಲ’

Post navigation

Previous Post: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸವದತ್ತಿ ವತಿಯಿಂದ ತಹಶೀಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸ್ವಾಗತ..
Next Post: SSLC ವಿದ್ಯಾರ್ಥಿನಿಗೆ ಹೃದಯಘಾತ:ಚಿಕಿತ್ಸೆ ಫಲಿಸದೇ ಸಾವು…

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme