Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಮೆಲುಕು

Posted on August 30, 2023 By Pulic Today No Comments on ಮೆಲುಕು
Share to all

ಮೆಲುಕು

ಬೆಳ್ಳಂ ಬೆಳ್ಗೆ ಅವ್ವನ ಕೂಗು
ಕೇಳಿದ್ರೂ ಕೇಳದಂತೆ ಮಲ್ಗೋದು
ಇತ್ತ ನಾನುನೂ ಕಿರುಚಿದೆ
ಅವ್ವ ಕರಿತೈತೆ ಎದ್ದೇಳಣ್ಣಯ್ಯ

ಜಳಕಾ ಮಾಡಿ ಮಡಿಉಟ್ಕೊ
ರಾಕಿ ಕಟ್ಟಸ್ಕೊ ಹಬ್ಬಾ ಐತಿ
ಸೋಂಬೇರಿ ಸೋಮಾರಿ ನೀ
ಹೊರ್ಗ ಹೋಗಬ್ಯಾಡಾ ಅಣ್ಣಯ್ಯ

ಮತ್ತದೇ ಜಗಳಾ ಜಡೆ ಎಳೆದು
ರಿಬ್ಬನ್ ಜಗ್ಗಿ ನೂಕಿ ಓಡೋದು
ಅವ್ವನ ದನಿಗೆ ಮುದುಡಿಕೊಳ್ಳುವ
ಮುದ್ದು ಪೆದ್ದು ಅಣ್ಣಯ್ಯ

ರಾಕಿ ಕಟ್ಟಿ ಸಕ್ಕರೆ ಬದಲು
ಉಪ್ಪು ತಿನಿಸಿ ಗೋಳಾಡಿಸಿ
ತಲೆಗೂದಲ ಜಗ್ಗಿ ತಿವಿದು
ಓಡಿದ ನೆನಪು ಮಾಸಿಲ್ಲ ಅಣ್ಣಯ್ಯ

ಅಪ್ಪಂಗೆ ಚಾಡಿ ಹೇಳಿ
ಅವ್ವಂಗೆ ಮೋಡಿ ಮಾಡಿ
ಅಜ್ಜ ಅಮ್ಮಂಗೆ ಅತ್ತು ಕೇಳಿ
ರೊಕ್ಕ ಇಸ್ಕೊಂಡದ್ದು ಎಷ್ಟ್ ಚಂದ ಅಣ್ಣಯ್ಯ

ದಿನಕ್ಕ ನಾಕಸಲಾ ಜಗಳಾಮಾಡೋದು
ವಾರಕ್ಕ ಎರಡ ಸಲಾ ಮಾತ ಬಿಡೋದು
ಆದ್ರೂ ಎನ್ ಮಜವಾಗಿತ್ತು
ಬಾಲ್ಯದ ಜೀವನ ಅಣ್ಣಯ್ಯ

ಸೂಟಿ ಇದ್ರ ಹೊಲದ ಸುತ್ತ
ನಮ್ಮ ಚಿತ್ತ
ಮಾವಿನಕಾಯಿ ಉಪ್ಪು ಖಾರಾ
ಸೇರಿಸಿ ದವಡೆ ಜುಮ್ ಅಂದ್ರೂ
ತಿಂದ ನೆನಪು ಕಾಡತೈತಿ ಅಣ್ಣಯ್ಯ

ಸಂಜೀ ಮುಂದ ಕಾಕಾನ ಚಕ್ಕಡಿ
ಬರೋದಾರಿಲಿ ನಿಂತ ನಾ ಮುಂದ ನೀ ಮುಂದಂತಾ ಬಿದ್ದಕೊಂಡ ಬೈಸ್ಕೊಂಡ ಕಿಸಿಕಿಸಿ
ನಗೋದಂದ್ರ ಹಬ್ಬಾ ಅಲ್ವೇನಣ್ಣಯ್ಯ

ಕೆಲಸಾ ಹೇಳಿದರ ಸಾಕು
ಓದದ ಬರಿಯೋದ ನೆಪಾ
ನೀ ಹೋಗ ನಾ ಹೋಗ
ಅನ್ನೋದ್ರಾಗ ಬೆಳಕ ಹರಿಯೋದ ಮರ್ತಿಲ್ಲ ಅಣ್ಣಯ್ಯ

ದಿನಾ ಕಳದಂಗ ದೊಡ್ಡವರಾದದ್ ಮರತ್ವಿ
ಮದ್ವಿ ಮಕ್ಕಳು ಅಂತಾ ನಮ್ಮ ಬಾಳೆಕ ನಾವ್ ಹತ್ತಿದ್ವಿ
ಆದ್ರೂ ಅಣ್ಣಾ ತಂಗಿ ಸಂಬಂಧ ಅಂದ್ರ ಬೆಲೆ ಕಟ್ಟಾಕ್ಕಾಗದ್ದೈತಿ ಹೌದ ಅಲ್ಲ್ವೇನಣ್ಣಯ್ಯ

ಶ್ರೀಮತಿ ಜ್ಯೋತಿ ಕೋಟಗಿ ಬೈಲಹೊಂಗಲ
ಬಿ.ಆರ್.ಪಿ ಚನ್ನಮ್ಮನ ಕಿತ್ತೂರು

P Views: 19
Headlines, ಮುಖ್ಯಾಂಶಗಳು, ರಾಷ್ರ್ಟೀಯ, ಶಿಕ್ಷಣ Tags:ಮೆಲುಕು, ಶ್ರೀಮತಿ ಜ್ಯೋತಿ ಕೋಟಗಿ ಬೈಲಹೊಂಗಲ ಬಿ ಆರ್ ಪಿ ಚನ್ನಮ್ಮನ ಕಿತ್ತೂರು

Post navigation

Previous Post: ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪ್ರಸ್ತಾವನೆ ಓದು ಕಡ್ಡಾಯ: ಸಚಿವ ಮಧು ಬಂಗಾರಪ್ಪ…..
Next Post: “ಪ್ರೌಢಶಾಲಾ ಶಿಕ್ಷಕರಿಗೆ ಇಲ್ಲ ಪರೀಕ್ಷೆ ಹೊಣೆ” ಈ ನಿರ್ಧಾರ ಖಂಡನೀಯ.” ಮಲ್ಲಿಕಾರ್ಜುನ ಚಿಕ್ಕಮಠ

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..
  • ಜೋಕುಮಾರನ ಆಗಮನ ಕುರಿತು ಶಿಕ್ಷಕ ಸಾಹಿತಿ ವೈ ಬಿ ಕಡಕೋಳ ಅವರ ಲೇಖನ
  • ಹಲವು ಬೇಡಿಕೆ ಹೊತ್ತು ಬೆಂಗಳೂರಿನತ್ತ ಹೊರಟ ಗ್ರಾಮೀಣ ಶಿಕ್ಷಕರ ಸಂಘ…
  • ಸುಳ್ಳ ಗ್ರಾಮದ ಸಿದ್ಧಾರೂಢ ಮಠದಲ್ಲಿ ಶ್ರಾವಣ ಮಾಸದ ಮಂಗಲೋತ್ಸವ ಕಾರ್ಯಕ್ರಮ..

Copyright © 2023 Public Today.

Powered by PressBook WordPress theme