Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಶಿಕ್ಷಕರ ದಿನಾಚರಣೆ ದಿನದದಂದೆ  ಶಿಕ್ಷಕರಿಗೆ ಹೆಚ್ಚಿನ ಜಬಾಬ್ದಾರಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.. ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್…

Posted on September 5, 2023 By Pulic Today No Comments on ಶಿಕ್ಷಕರ ದಿನಾಚರಣೆ ದಿನದದಂದೆ  ಶಿಕ್ಷಕರಿಗೆ ಹೆಚ್ಚಿನ ಜಬಾಬ್ದಾರಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.. ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್…
Share to all

ಶಿಕ್ಷಕರ ದಿನಾಚರಣೆ ದಿನದದಂದೆ  ಶಿಕ್ಷಕರಿಗೆ ಹೆಚ್ಚಿನ ಜಬಾಬ್ದಾರಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ..

ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್…

ಬೆಂಗಳೂರು: ವರ್ಷದಲ್ಲಿ ಇನ್ಮುಂದೆ ಕಲಿಕಾ ಚೇತರಿಕೆಯ ಕಾರಣದಿಂದಾಗಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಬಾರಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂಬುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದರು.

ಇಂದು ವಿಧಾನಸೌಧದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಶಾಲಾ ಶಿಕ್ಷಕರಿಗೆ ಇಪ್ಪತ್ತು, ಪ್ರೌಢ ಶಾಲಾ ಶಿಕ್ಷಕರಿಗೆ 20 ಪ್ರಶಸ್ತಿ, ವಿಶೇಷ ಶಿಕ್ಷಕರಿಗೆ ಇಬ್ಬರು ಸೇರಿದಂತೆ 31 ಉತ್ತಮ ಶಿಕ್ಷಕರಿಗೆ ರಾಜ್ಯ ಶಿಕ್ಷಕರ ಪ್ರಶಸ್ತಿಯನ್ನು ನೀಡಲಾಗಿದೆ ಎಂದರು.ಶಾಲೆಗೆ ಹೋಗೋದಕ್ಕೆ ಮಕ್ಕಳಿಗೆ ಶಕ್ತಿ ಬೇಕು. ಮುಂಚೆ ಮೊಟ್ಟೆ ವಾರಕ್ಕೆ ಒಂದು ಕೊಡುತ್ತಿದ್ದೆವು.

ಈಗ 1ನೇ ತರಗತಿಯಿಂದ 8ನೇ ತರಗತಿಯವರೆಗೆ ಒಂದು ಮೊಟ್ಟೆ ಕೊಡಲಾಗುತ್ತಿತ್ತು. 10ನೇ ತರಗತಿವರೆಗೆ ವಾರಕ್ಕೆ ಎರಡು ಮೊಟ್ಟೆಯನ್ನು ಕೊಡುವಂತ ನಿರ್ಧಾರವನ್ನು ಸಿಎಂ ಸಿದ್ಧರಾಮಯ್ಯ ಮಾಡಿದರು. 58 ಲಕ್ಷ ಮಕ್ಕಳಿಗೆ ಈಗ ರಾಜ್ಯ ಮಟ್ಟದಲ್ಲಿ ವಾರದಲ್ಲಿ ಎರಡು ದಿನ ಮೊಟ್ಟೆ ನೀಡಲಾಗುತ್ತಿದೆ ಎಂದರು.

ಶಿಕ್ಷಕರ ವರ್ಗಾವಣೆಯ ನಂತ್ರ ಕೆಲವೆಡೆ ಶಿಕ್ಷಕರ ಕೊರತೆ ಉಂಟಾಯಿತು. ಸಿಎಂ ಸಿದ್ಧರಾಮಯ್ಯ ಅವರು ಈ ವಿಚಾರ ಗಮನಿಸಿ, ಅತಿಥಿ ಶಿಕ್ಷಕರ ನೇಮಕಕ್ಕೆ ಅವಕಾಶ ನೀಡಿದರು. 43 ಸಾವಿರ ಮಂದಿ ಈಗ ಅತಿಥಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಶಿಕ್ಷಕರ ದಿನಾಚರಣೆ ಇರೋದರಿಂದ ನಿಮ್ಮ ಮಕ್ಕಳು ಎಷ್ಟು ಒತ್ತಡದಲ್ಲಿ ಓದುತ್ತಿರುತ್ತಾರೆ. ಹೇಗೆ ಒತ್ತಡದಲ್ಲಿ ಇರುತ್ತದೆ ಎಂಬುದು ನನಗೆ ಗೊತ್ತಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಪಿಯುಸಿ, ಎಸ್ ಎಸ್ ಎಲ್ ಸಿ ಯನ್ನು ವರ್ಷದಲ್ಲಿ ಮೂರು ಬಾರಿ ಬರೆಯೋದಕ್ಕೆ ಅವಕಾಶ ನೀಡಲಾಗುತ್ತೆದೆ ಎಂದರು.

ಹತ್ತನೆ ತರಗತಿಯಲ್ಲಿ ಮೂರು ಬಾರಿ ತೆಗೆದುಕೊಳ್ಳಬಹುದು. ಯಾವುದೇ ಕಾರಣಕ್ಕೂ ಮಕ್ಕಳಿಗೆ ಒಂದು ವರ್ಷ ವ್ಯರ್ಥ ಆಗಬಾರದು ಅಂತ ವರ್ಷದಲ್ಲಿ ಮೂರು ಬಾರಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಯಾವುದೋ ಒಂದು ಕಾರಣಕ್ಕೆ ವಿದ್ಯಾರ್ಥಿಗಳು ಫೇಲ್ ಆದರೇ ಇಡೀ ವರ್ಷ ಅವರ ಜೀವನ ವ್ಯರ್ತವಾಗಬಾರದು. ಪರೀಕ್ಷೆಗಳು ಮಕ್ಕಳನ್ನು ಫೇಲ್ ಮಾಡೋದಕ್ಕಲ್ಲ, ಜೀವನದ ಬಗ್ಗೆ ಕಲಿಕೆಗಾಗಿ ಇರಬೇಕು ಎಂದು ತಿಳಿಸಿದರು.

P Views: 2,208
Headlines, ಮುಖ್ಯಾಂಶಗಳು, ರಾಷ್ರ್ಟೀಯ, ಶಿಕ್ಷಣ Tags:ಶಿಕ್ಷಕರ ದಿನಾಚರಣೆ ದಿನದದಂದೆ  ಶಿಕ್ಷಕರಿಗೆ ಹೆಚ್ಚಿನ ಜಬಾಬ್ದಾರಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.. ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್...

Post navigation

Previous Post: ಸಮಾಜದ, ದೇಶದ ಭವಿಷ್ಯವನ್ನು ರೂಪಿಸುವವರು ಶಿಕ್ಷಕರು ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ.
Next Post: ರಾಷ್ಟ್ರ ಪ್ರಶಸ್ತಿ ಪುರಸ್ಕೃತರು ಆದ ಹಿರಿಯ ಶಿಕ್ಷಕ ಶ್ರೀ ಪಿ ಎಸ್ ಧರೆಣಪ್ಪನವರ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಹಾವೀರ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನ ಮಾಡಿ ಗೌರವಿಸಲಾಯಿತು

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme