Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಸರ್ಕಾರಿ ನೌಕರರ ನಿಯೋಜನೆ ಕುರಿತಂತೆ ಮಾರ್ಗಸೂಚಿಗಳನ್ನು ಹೊರಡಿಸಿದ ರಾಜ್ಯ ಸರ್ಕಾರ..

Posted on September 13, 2023 By Pulic Today No Comments on ಸರ್ಕಾರಿ ನೌಕರರ ನಿಯೋಜನೆ ಕುರಿತಂತೆ ಮಾರ್ಗಸೂಚಿಗಳನ್ನು ಹೊರಡಿಸಿದ ರಾಜ್ಯ ಸರ್ಕಾರ..
Share to all

ಸರ್ಕಾರಿ ನೌಕರರ ನಿಯೋಜನೆ ಕುರಿತಂತೆ ಮಾರ್ಗಸೂಚಿಗಳನ್ನು ಹೊರಡಿಸಿದ ರಾಜ್ಯ ಸರ್ಕಾರ..

ಬೆಂಗಳೂರು: ಸರ್ಕಾರಿ ನೌಕರರ ನಿಯೋಜನೆ ಬಗ್ಗೆ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಮತ್ತೆ ಹೊರಡಿಸಿದೆ. ಸರ್ಕಾರಿ ನೌಕರರ ನಿಯೋಜನೆಗೆ ಸಂಬಂಧಿಸಿದಂತೆ ಸೂಚನೆಗಳು ಎನ್ನುವ ಸುತ್ತೊಲೆಯಲ್ಲಿ ರಾಜ್ಯ ಸರ್ಕಾರ ಈ ಕೆಳಕಂತೆ ಮಾರ್ಗಸೂಚನೆಯನ್ನು ಹೊರಡಿಸಿದೆ.

1. ಕರ್ನಾಟಕ ಸಿವಿಲ್ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977ರ ನಿಯಮ 16(a)(ii)ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿ ಸಮಾನಾಂತರ ಹುದ್ದೆಗೆ ನಿಯೋಜನೆ ಮೇಲೆ ಸೇವಾ ತೆರಳುವುದಕ್ಕೆ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ.
ಕರ್ನಾಟಕ ನಾಗರಿಕ ನಿಯಮಾವಳಿಗಳ ನಿಯಮ 50(3)ರಲ್ಲಿ ಸರ್ಕಾರದ ವಿಶೇಷ ಆದೇಶಗಳಿರದ ಹೊರತು ಸಾಮಾನ್ಯವಾಗಿ ನಿಯೋಜನೆಯ ಅವಧಿಯನ್ನು ಐದು ವರ್ಷಗಳಿಗಿಂತ ಹೆಚ್ಚಿಗೆ ವಿಸ್ತರಿಸದಿರುವಂತೆ ಸೂಚಿಸಲಾಗಿದೆ.

2. ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಲಾದ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 22 ಸೇನೌವ 2013, ದಿನಾಂಕ:07.06.2013ರ ಕಂಡಿಕೆ 6(ಆ) ರಲ್ಲಿ ಯಾವುದೇ ಒಂದು ಹುದ್ದೆಗೆ ಒಂದು ಸಂದರ್ಭದಲ್ಲಿ ಮಾಡುವ ನಿಯೋಜನೆಯ ಗರಿಷ್ಠ ಅವಧಿಯು ಐದು ವರ್ಷ ಎಂದು ಸ್ಪಷ್ಟಪಡಿಸಲಾಗಿರುತ್ತದೆ.

ಮುಂದುವರೆದು, ಹಿಂದಿನ ನಿಯೋಜನೆಯ ನಂತರ ಮಾತ್ರ ಇಲಾಖೆಯಲ್ಲಿ ಎರಡು ವರ್ಷಗಳ ಚಾತುರ್ಮಾಸ್ಯ ಅವಧಿಯನ್ನು (Cooling-off period) ಮುಗಿಸಬೇಕಾಗುತ್ತದೆ ಎಂಬ ಬಗ್ಗೆಯೂ ಸಹ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿಯೋಜನೆಗೆ ಸಂಬಂಧಿಸಿದಂತೆ ಈ ಕೆಳಕಂಡ ಮುಂದುವರೆದ ಸೂಚನೆಗಳನ್ನು ನೀಡಲಾಗಿದೆ:

(ಅ) ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಬೇರೆ ಇಲಾಖೆಯಿಂದ ನಿಯೋಜನೆಗೆ ಅವಕಾಶ ಕಲ್ಪಿಸದೇ ಇರುವ ಹುದ್ದೆಗಳಿಗೆ ನಿಯೋಜನ ಮಾಡುವುದನ್ನು ನಿರ್ಬಂಧಿಸಿದೆ.
(ಬ) ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿಯೊಂದಿಗೆ ನಿಯೋಜನೆಯ ಮೇಲೆ ಮುಂದುವರೆದಿರುವ ಅಧಿಕಾರಿ/ನೌಕರರು ಒಂದು ವೇಳೆ ಗರಿಷ್ಠ ಐದು ವರ್ಷಗಳ ನಿಯೋಜನಾ ಅವಧಿಯನ್ನು ಪೂರ್ಣಗೊಳಿಸಿದ್ದಲ್ಲಿ ಹಾಗೂ ಸರ್ಕಾರದ ವಿಶೇಷ ಆದೇಶಗಳಿರದೆ ಸದರಿ ನಿಯೋಜನೆಯಲ್ಲಿ ಮುಂದುವರೆದಿದ್ದಲ್ಲಿ ಅಂತಹವರನ್ನು ಮಾತ್ರ ಇಲಾಖೆಗೆ ಹಿಂತಿರುಗಿಸಲು ಕೂಡಲೇ ಕ್ರಮವಹಿಸುವುದು.

ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಯೋಜನೆಗೆ ಅವಕಾಶವಿರುವ ಹುದ್ದೆಗಳಿಗೆ ಮಾತ್ರ ಆ ಹುದ್ದೆಗೆ ಸಮಾನ ದರ್ಜೆ/ಹುದ್ದೆ ಹೊಂದಿರುವ ಅಧಿಕಾರಿ/ನೌಕರರನ್ನು ಅನಿವಾರ್ಯ ಪಸಂಗಗಳಲ್ಲಿ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ನಿಯಮಾನುಸಾರ ನಿಯೋಜನೆಗೊಳಿಸುವುದು.
(ಡ) ಯಾವುದೇ ಇಲಾಖೆಯಲ್ಲಿಯಾದರೂ ಕೆಳದರ್ಜೆಯ ಅಧಿಕಾರಿಗಳನ್ನು ಮೇಲ್ದರ್ಜೆಯ ಹುದ್ದೆಗೆ (higher rank post) ಸ್ವಂತ ವೇತನ ಶ್ರೇಣಿಯ ಆಧಾರದ ಮೇಲೆ ನೇಮಕ ಮಾಡುವುದನ್ನು/ ನಿಯೋಜನೆಗೊಳಿಸುವುದನ್ನು ನಿರ್ಬಂಧಿಸಿದೆ.

3. ಈ ಮೇಲಿನ ಸೂಚನೆಗಳನ್ನು ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಈ ಮೂಲಕ ಎಚ್ಚರಿಕೆ ನೀಡಲಾಗಿದೆ ಅಂತ ತಿಳಿಸಿದೆ.

P Views: 838
Headlines, ಮುಖ್ಯಾಂಶಗಳು, ಶಿಕ್ಷಣ Tags:ಸರ್ಕಾರಿ ನೌಕರರ ನಿಯೋಜನೆ ಕುರಿತಂತೆ ಮಾರ್ಗಸೂಚಿಗಳನ್ನು ಹೊರಡಿಸಿದ ರಾಜ್ಯ ಸರ್ಕಾರ..

Post navigation

Previous Post: ಮಾರುತಿ ಮೆಡಿಕಲ್ ಮಾಲೀಕರಿಂದ ಶಾಲಾ ವಿದ್ಯಾರ್ಥಿಗಳಿಗೆ ನೊಟ್ ಬುಕ್ ವಿತರಣೆ.
Next Post: ಸೆ.15 : ಅಮ್ಮಿನಬಾವಿ ಹಿರೇಮಠದಲ್ಲಿ ಪುರಾಣ ಮಂಗಲ ಶ್ರೀಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಸೇವಾಕರ್ತರಿಗೆ ಗುರುರಕ್ಷೆ

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme