ಜಿಲ್ಲೆಯಾದ್ಯಂತ ಎಂದಿನಂತೆ ನಾಳೆಯೂ ಶಾಲಾ ಕಾಲೇಜು, ಸರಕಾರಿ ಕಚೇರಿಗಳ ಕರ್ತವ್ಯ ನಿರ್ವಹಣೆ; ಸಾರಿಗೆ, ಇತರೆ ಸೇವೆಯಲ್ಲಿ ಯಥಾಸ್ಥಿತಿ: ಸೂಕ್ತ ಪೊಲೀಸ್ ಬಂದೋಬಸ್ತ ವ್ಯವಸ್ಥೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಧಾರವಾಡ ಸೆ.28:* ಜಿಲ್ಲೆಯಾದ್ಯಂತ ನಾಳೆಯೂ (ಸೆ.29) ಎಂದಿನಂತೆ ಶಾಲೆ, ಕಾಲೇಜು, ಸರಕಾರಿ ಕಚೇರಿಗಳು ಕರ್ತವ್ಯ ನಿರ್ವಹಿಸುತ್ತವೆ. ನಾಗರಿಕರಿಗೆ ಸಾರಿಗೆ, ಔಷಧಿ ಸೇರಿದಂತೆ ಎಲ್ಲ ಅಗತ್ಯ ಸೇವೆಗಳ ಪೂರೈಕೆಯಲ್ಲಿ ಯಾವುದೇ ಅಡಚನೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನಾಳೆಯ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಪೊಲೀಸ್ ಕಮಿಷನರ್ ಹಾಗೂ ಎಸ್.ಪಿ. ಅವರ ನೇತೃತ್ವದಲ್ಲಿ ಮುನ್ನೆಚ್ಚರಿಕೆಯಾಗಿ ಅಗತ್ಯ ಸಿಬ್ಬಂದಿ, ಮೀಸಲು ಪೊಲೀಸ್ ಪಡೆ ನಿಯೋಜಿಸಿ, ಸೂಕ್ತ ಪೊಲೀಸ್ ಬಂದೋಬಸ್ತ ಕೈಗೊಳ್ಳಲಾಗಿದೆ.
ಸಾರ್ವಜನಿಕರಿಗೆ ಮತ್ತು ಇತರೆ ತೊಂದರೆಗಳು ಉಂಟಾಗದಂತೆ ಪ್ರತಿಭಟನಾಕಾರರು ಶಾಂತ ರೀತಿಯಲ್ಲಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಲು ಸೂಚಿಸಲಾಗಿದೆ.
ಪ್ರತಿಭಟನಾಕಾರರು ಸಹ ಶಾಂತ ರೀತಿಯಲ್ಲಿ ಪ್ರತಿಭಟಿಸಿ, ಸಹಕಾರ ನೀಡುವುದಾಗಿ ಹೇಳಿದ್ದಾರೆ.
ಸಾರ್ವಜನಿಕರು ಯಾವುದೇ ಗೊಂದಲಗಳಿಗೆ ಒಳಗಾಗದೆ ದಿನನಿತ್ಯದ ಕಾರ್ಯಗಳನ್ನು ಮಾಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*******************
ತಮಿಳುನಾಡಿಗೆ ಕಾವೇರಿ ನೀರು ಹರಿಬಿಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು, ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕುತ್ತಿದ್ದು, ನಾಳೆ (ಸೆ.29) ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಹೀಗಾಗಿ ಬೆಂಗಳೂರು ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ರಜೆ ನೀಡುವ ವಿಚಾರವಾಗಿ ಗೊಂದಲ ಮೂಡಿದೆ.
ಹಾಸನ, ಸೆ.28: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಬಿಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು, ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕುತ್ತಿದ್ದು, ನಾಳೆ (ಸೆ.29) ಕರ್ನಾಟಕ ಬಂದ್ಗೆ (Karnataka Bandh) ಕರೆ ನೀಡಲಾಗಿದೆ. ಹೀಗಾಗಿ ಬೆಂಗಳೂರು ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಹಾಸನ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ರಜೆ ನೀಡುವ ವಿಚಾರವಾಗಿ ಗೊಂದಲ ಮೂಡಿದೆ.
ಕರ್ನಾಟಕ ಬಂದ್ ಹಿನ್ನೆಲೆ ನಾಳೆ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ರಜೆ ಘೋಷಣೆ ಮಾಡಿವೆ. ಮಕ್ಕಳಿಗೆ ಅನಾನುಕೂಲ ಉಂಟಾಗುವ ಸಾಧ್ಯತೆ ಹಿನ್ನೆಲೆ ರಜೆ ನೀಡಲಾಗಿದೆ. ಇದೀಗ ಬೇಲೂರು ತಾಲೂಕಿನ ಪ್ರಾಥಮಿಕ ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಬಿಇಓ ನಾರಾಯಣ್ ಆದೇಶಿಸಿದ್ದಾರೆ. ಬೇಲೂರನಲ್ಲಿ ಬಹುತೇಕ ಬಂದ್ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪ್ರಾಥಮಿಕ ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕರ್ನಾಟಕ ಬಂದ್: ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…
ತಮಿಳುನಾಡಿಗೆ ಕಾವೇರಿ ನೀರು ಹರಿಬಿಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು, ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕುತ್ತಿದ್ದು, ನಾಳೆ (ಸೆ.29) ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಹೀಗಾಗಿ ಬೆಂಗಳೂರು ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ರಜೆ ನೀಡುವ ವಿಚಾರವಾಗಿ ಗೊಂದಲ ಮೂಡಿದೆ.
ಕರ್ನಾಟಕ ಬಂದ್: ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಕರ್ನಾಟಕ ಬಂದ್ ಹಿನ್ನೆಲೆ ಕೆಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಹಾಸನ, ಸೆ.28: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಬಿಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು, ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕುತ್ತಿದ್ದು, ನಾಳೆ (ಸೆ.29) ಕರ್ನಾಟಕ ಬಂದ್ಗೆ (Karnataka Bandh) ಕರೆ ನೀಡಲಾಗಿದೆ. ಹೀಗಾಗಿ ಬೆಂಗಳೂರು ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಹಾಸನ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ರಜೆ ನೀಡುವ ವಿಚಾರವಾಗಿ ಗೊಂದಲ ಮೂಡಿದೆ.
ಕರ್ನಾಟಕ ಬಂದ್ ಹಿನ್ನೆಲೆ ನಾಳೆ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ರಜೆ ಘೋಷಣೆ ಮಾಡಿವೆ. ಮಕ್ಕಳಿಗೆ ಅನಾನುಕೂಲ ಉಂಟಾಗುವ ಸಾಧ್ಯತೆ ಹಿನ್ನೆಲೆ ರಜೆ ನೀಡಲಾಗಿದೆ. ಇದೀಗ ಬೇಲೂರು ತಾಲೂಕಿನ ಪ್ರಾಥಮಿಕ ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಬಿಇಓ ನಾರಾಯಣ್ ಆದೇಶಿಸಿದ್ದಾರೆ. ಬೇಲೂರನಲ್ಲಿ ಬಹುತೇಕ ಬಂದ್ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪ್ರಾಥಮಿಕ ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹಾಸನ ತಾಲೂಕಿನ ಪ್ರಾಥಮಿಕ ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಕ್ಷೇತ್ರ ಶಿಕ್ಷಣಾದಿಕಾರಿ ಜಿ.ಎನ್.ಮಂಜುಳ, ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದರು. ಚನ್ನರಾಯಪಟ್ಟಣ ತಾಲ್ಲೂಕಿನ ಪ್ರಾಥಮಿಕ ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಬಿಇಓ ದೀಪಾ ಎಚ್.ಎನ್ ಆದೇಶ ಹೊರಡಿಸಿದರೆ, ಅರಕಲಗೂಡು ತಾಲೂಕಿನ ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ ನೀಡಿ ಬಿಇಓ ದೇವರಾಜ್ ಆದೇಶ ಹೊರಡಿಸಿದ್ದಾರೆ. ಆಲೂರು ತಾಲ್ಲೂಕಿನ ಶಾಲೆಗಳಿಗೆ ರಜೆ ನೀಡಿ ಬಿಇಓ ಕೃಷ್ಣೇಗೌಡ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕನ್ನಡಪರ ಹಾಗು ರೈತಪರ ಸಂಘಟನೆಗಳು ಸಂಪೂರ್ಣ ಬಂದ್ಗೆ ಕರೆ ನೀಡಿವೆ. ಈ ಬಂದ್ಗೆ ಹಲವಾರು ಸಂಗಟನೆಗಳು ಬೆಂಬಲ ಸೂಚಿಸಿವೆ. ಸದ್ಯ ಎರಡು ತಾಲೂಕುಗಳಲ್ಲಿ ಪ್ರಾಧಮಿಕ ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದ್ದು, ಉಳಿದಂತೆ ಗೊಂದಲದ ಗೂಡಾಗಿದೆ.
ಕರ್ನಾಟಕ ಬಂದ್ ಹಿನ್ನೆಲೆ ನಾಳೆ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ರಜೆ ಘೋಷಣೆ ಮಾಡಿವೆ. ಮಕ್ಕಳಿಗೆ ಅನಾನುಕೂಲ ಉಂಟಾಗುವ ಸಾಧ್ಯತೆ ಹಿನ್ನೆಲೆ ರಜೆ ನೀಡಲಾಗಿದೆ. ಆದರೆ ಶಿಕ್ಷಣ ಇಲಾಖೆಯು ಸರ್ಕಾರಿ ಶಾಲೆಗಳ ರಜೆ ಬಗ್ಗೆ ಇನ್ನು ಯಾವುದೇ ತೀರ್ಮಾನ ಕೈಗೊಂಡಿಲ್ಲ.
ಮಂಡ್ಯದಲ್ಲಿ ಪ್ರತಿಭಟನೆಯ ಕಿಚ್ಚು, ಶಾಲಾ ಕಾಲೇಜುಗಳಿಗೆ ರಜೆ
ಮಂಡ್ಯ: ಜಿಲ್ಲೆಯಲ್ಲಿ ಪ್ರತಿಭಟನೆಯ ಕಾವು ಹೆಚ್ಚಿದೆ. ಹೀಗಾಗಿ ನಾಳೆ ಜಿಲ್ಲಾದ್ಯಂತದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜಿಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ಕುಮಾರ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ರಜೆ
ನೆಲಮಂಗಲ: ನಾಳೆ ಕರ್ನಾಟಕ ಬಂದ್ ಹಿನ್ನೆಲೆ ಶಾಲಾ ಕಾಲೇಜು ಮಕ್ಕಳ ಹಿತದೃಷ್ಟಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಮಾಧ್ಯಮ ಹೇಳಿಕೆ ನೀಡಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಮೈಸೂರು: ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ನಾಳೆ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ಜಿಲ್ಲೆಯಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಇದಕ್ಕೂ ಮುನ್ನ ರಜೆ ಘೋಷಣೆ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪರಿಸ್ಥಿತಿ ಅವಲೋಕಿಸಿ ಶಾಲಾ ಕಾಲೇಜಿಗೆ ರಜೆ ನೀಡುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದಿದ್ದರು.
ದಕ್ಷಿಣ ಕನ್ನಡ ಜಿಲ್ಲೆ ಶಾಲಾ ಕಾಲೇಜುಗಳಿಗಿಲ್ಲ ರಜೆ
ದಕ್ಷಿಣ ಕನ್ನಡ ಜಿಲ್ಲೆಗೆ ಕರ್ನಾಟಕ ಬಂದ್ ಬಿಸಿ ತಟ್ಟುವ ಸಾಧ್ಯತೆ ಕಡಿಮೆ. ಹೀಗಾಗಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ನೀಡದಿರುವ ತೀರ್ಮಾನಕ್ಕೆ ಜಿಲ್ಲಾಡಳಿತ ಬಂದಿದೆ. ಯಾವುದೇ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
ಕೋಲಾರದ ಶಾಲೆಗಳಿಗಿಲ್ಲ ರಜೆ..
ನಾಳೆ ಅಖಂಡ ಕರ್ನಾಟಕ ಬಂದ್ ಇದ್ದರೂ ಕೋಲಾರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇರುವುದಿಲ್ಲ. ಎಂದಿನಂತೆ ಬಸ್ ಸಂಚಾರ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ಹೇಳಿದ್ದಾರೆ. ಬಲವಂತದ ಬಂದ್ ಮಾಡುವಂತ್ತಿಲ್ಲ, ಪರೀಕ್ಷೆ ಹಾಗೂ ಮಕ್ಕಳ ದೃಷ್ಟಿಯಿಂದ ಬಲವಥದ ಬಂದ್ ಬೇಡ ಎಂದು ಮನವಿ ಮಾಡಿದರು.