ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸಿಗಲಿದೆ..
ಬೆಂಗಳೂರು: ಏಳನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು.
ಮೂಲಗಳ ಪ್ರಕಾರ ಆಯೋಗವು ನವೆಂಬರ್ ಅಂತ್ಯಕ್ಕೆ ತನ್ನ ವರದಿ ಸಲ್ಲಿಸಲಿದೆ. ವರದಿಯ ಶಿಫಾರಸುಗಳು ಜಾರಿಯಾದರೆ ರಾಜ್ಯ ಸರ್ಕಾರಿ ನೌಕರರ ವೇತನವು ಶೇ.38ರಿಂದ 40% ಹೆಚ್ಚಳವಾಗುವ ಸಾಧ್ಯತೆ ಇದೆ.
ಈ ಸಮಿತಿಯು ಮೇ 19ರಂದೇ ವರದಿಯನ್ನು ಸಲ್ಲಿಸಬೇಕಿತ್ತು. ಆದರೆ, ಚುನಾವಣೆ ಇದ್ದುದರಿಂದ ಮತ್ತೆ 6 ತಿಂಗಳ ಕಾಲಾವಕಾಶವನ್ನು ವಿಸ್ತರಿಸಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
7ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ಹಾಗೂ ಸದಸ್ಯರ ನಿಯೋಗದವರು ಇಂದು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.