ಗುರುಮಾತೆಯರ ನೀರಿನ ಬಾಟಲಿಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು….⁉️
ಕಾರಣ ತಿಳಿದರೆ ದಂಗಾಗತೀರಿ…
ಎಂಥಾ ಕಾಲ ಬಂತು ಶಿವ ಶಿವ….
ಉಳ್ಳಾಲ:
ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದಕಾರಣಕ್ಕೆ ಆರನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಗಣಿತ ಶಿಕ್ಷಕಿಯೊಬ್ಬರ ನೀರಿನ ಬಾಟಲಿಗೆ ಅವಧಿ ಮೀರಿದ ಮಾತ್ರೆ ಹಾಕಿರುವ ಆತಂ ಕಕಾರಿ ಘಟನೆ ಶುಕ್ರವಾರ ಉಳ್ಳಾಲದ ಶಾಲೆ ಯಲ್ಲಿ ನಡೆದಿದೆ. ಈ ನೀರು ಕುಡಿದ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡಿದ್ದಾರೆ.
ಶಾಲೆಯಲ್ಲಿ ನಡೆದ ಘಟಕ ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಕಡಿಮೆ ಅಂಕ ಬಂದಿದ್ದು, ಸರಿಯಿದ್ದ ಉತ್ತರಕ್ಕೆ ಶಿಕ್ಷಕಿ ತಪ್ಪು ಹಾಕಿದ್ದಾರೆ ಎನ್ನುವ ದ್ವೇಷದಿಂದ ವಿದ್ಯಾರ್ಥಿನಿ ಶಿಕ್ಷಕಿಯ ವಿರುದ್ಧ ಸೇಡು ತೀರಿಸಿಕೊಳ್ಳಲು ತನ್ನ ಸ್ನೇಹಿತೆಯೊಬ್ಬಳ ಸಹಾಯ ಪಡೆದುಕೊಂಡು ಈ ಕೃತ್ಯ ಎಸಗಿದ್ದಾಳೆ.
ಸ್ಟಾಫ್ ರೂಮ್ನಲ್ಲಿ ಶಿಕ್ಷಕಿಯರಿಲ್ಲದ ವೇಳೆ ಅವಧಿ ಮೀರಿದಂಥಹ ಮಾತ್ರೆಗಳನ್ನು ಶಿಕ್ಷಕಿಯ ವಾಟರ್ ಬಾಟಲಿಗೆ ಹಾಕಿದ್ದಾರೆ. ಈ ನೀರನ್ನು ಗಣಿತ ಶಿಕ್ಷಕಿ ಜತೆಗೆ ಮತ್ತೊಬ್ಬ ಶಿಕ್ಷಕಿಯೂ ಕುಡಿದಿದ್ದಾರೆ. ಆ ಬಳಿಕ ಒಬ್ಬರು ಶಿಕ್ಷಕಿ ಅಸ್ವಸ್ಥಗೊಂ ಡರೆ, ಮತ್ತೊಬ್ಬ ಶಿಕ್ಷಕಿ ಮುಖದಲ್ಲಿ ಊತ ಉಂಟಾಗಿದೆ. ನೀರಿನ ರುಚಿಯಲ್ಲಿ ಬದಲಾವಣೆ ಕಂಡುಬಂದು ಸೂಕ್ಷ್ಮವಾಗಿ ಗಮನಿಸಿದಾಗ ನೀರಲ್ಲಿ ಮಾತ್ರೆಗಳಿರುವುದು ಕಂಡುಬಂದಿದೆ. ಈ ಕುರಿತು ವಿಚಾರಿಸಿ ಸಿಸಿಟಿವಿ ಗಮನಿಸಿದಾಗ ವಿದ್ಯಾರ್ಥಿನಿಯರ ಕೃತ್ಯ ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ಶುಕ್ರವಾರ ಶಾಲೆಯಲ್ಲಿ ಎಸ್ಡಿಎಂಸಿ ತುರ್ತು ಸಭೆ ನಡೆಸಿ ವಿದ್ಯಾರ್ಥಿನಿ ಯರಿಬ್ಬರಿಗೆ ಟೀಸಿ ನೀಡಲು ಶಾಲಾ ಆಡಳಿತ ಮಂಡಳಿ ನಿರ್ಧರಿಸಿದೆ.