Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಏಕಾಗ್ರತೆಯ ಕಠಿಣ ಪರಿಶ್ರಮದಿಂದ ಸಾಧನೆ ಸಾಧ್ಯ’.. ಲೀಲಾವತಿ ಚರಂತಿಮಠ ಪಬ್ಲಿಕ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿದ ಡಾ. ಕರಡೋಣಿ

Posted on November 13, 2023 By Pulic Today No Comments on ಏಕಾಗ್ರತೆಯ ಕಠಿಣ ಪರಿಶ್ರಮದಿಂದ ಸಾಧನೆ ಸಾಧ್ಯ’.. ಲೀಲಾವತಿ ಚರಂತಿಮಠ ಪಬ್ಲಿಕ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿದ ಡಾ. ಕರಡೋಣಿ
Share to all

ಏಕಾಗ್ರತೆಯ ಕಠಿಣ ಪರಿಶ್ರಮದಿಂದ ಸಾಧನೆ ಸಾಧ್ಯ’..

ಲೀಲಾವತಿ ಚರಂತಿಮಠ ಪಬ್ಲಿಕ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿದ ಡಾ. ಕರಡೋಣಿ

ಧಾರವಾಡ: ವಿಧದ ಕ್ರೀಡಾ ಸಾಧಕರ ಸಾಧನೆಯಿಂದಾಗಿ ಭಾರತದ ಗೌರವ ಮತ್ತಷ್ಟು ಅಧಿಕವಾಗಿದೆ. ಕ್ರೀಡಾ ಪಟುಗಳು ರೂಢಿಸಿಕೊಳ್ಳುವ ಏಕಾಗ್ರತೆಯ ಕಠಿಣ ಪರಿಶ್ರಮದಿಂದ ಅವರು ವಿಶ್ವದೆತ್ತರದ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ನಗರದ ಪ್ರತಿಷ್ಠಿತ ಕರ್ನಾಟಕ ಕಲಾ ಕಾಲೇಜು(ಕೆಸಿಡಿ) ಪ್ರಾಚಾರ್ಯ ಡಾ. ಡಿ. ಬಿ. ಕರಡೋಣಿ ಹೇಳಿದರು.

ಅವರು ಇಲ್ಲಿಯ ಕಾಮನಕಟ್ಟಿ ಬಳಿ ಇರುವ ಲೀಲಾವತಿ ಆರ್. ಚರಂತಿಮಠ ಪಬ್ಲಿಕ್ ಶಾಲೆಯ ಪ್ರಸಕ್ತ ಸಾಲಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುತ್ತಿದ್ದರು. ಕ್ರೀಡೆಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿವೆ. ಕ್ರೀಡೆಗಳ ಮೂಲಕ ಬಹು ಮುಖ್ಯವಾಗಿ ದೈಹಿಕ ಆರೋಗ್ಯ ಸಂವರ್ಧನೆಗೊಳ್ಳುತ್ತದೆ. ಜೊತೆಗೆ ಸ್ಪರ್ಧಾ ಮನೋಭಾವ, ಕಷ್ಟ ಸಹಿಷ್ಣುತೆ, ತಾಳ್ಮೆ, ಎಂತಹುದೇ ಪರಿಸ್ಥಿತಿಯನ್ನಾದರೂ ನಿಭಾಯಿಸುವ ಛಲ ಸೇರಿದಂತೆ ಅನೇಕ ಗುಣಾತ್ಮಕ ಸಂಗತಿಗಳು ವಿದ್ಯಾರ್ಥಿಗಳಲ್ಲಿ ಅಂಕುರಿಸುತ್ತವೆ. ಹಾಗಾಗಿ ವಿದ್ಯಾರ್ಥಿಗಳು ಪ್ರತಿದಿನ ವಿವಿಧ ಆಟೋಟಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಲೀಲಾವತಿ ಚರಂತಿಮಠ ಪಬ್ಲಿಕ್ ಶಾಲೆ ಸಂಸ್ಥಾಪಕ ಅರುಣ ಚರಂತಿಮಠ ಅವರು ಶಾಲಾ ಚಟುವಟಿಕೆಗಳಲ್ಲಿ ಕ್ರೀಡೆ, ವಿಜ್ಞಾನ-ತಂತ್ರಜ್ಞಾನ, ಸಾಹಿತ್ಯ, ಸಂಗೀತ, ಕಲೆ ಸೇರಿದಂತೆ ವಿದ್ಯಾರ್ಥಿಗಳ ಬಹುಮುಖ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಸಂಗತಿಗಳಿಗೆ ಆದ್ಯತೆ ನೀಡಿರುವುದು ಶಿಕ್ಷಣ ಚಿಂತಕರ ಗಮನಸೆಳೆದಿದೆ ಎಂದೂ ಡಾ. ಕರಡೋಣಿ ಶ್ಲ್ಯಾಘಿಸಿದರು.

ಕೆಸಿಡಿ ಪ್ರಿನ್ಸಿಪಾಲ್ ಡಾ.ಡಿ.ಬಿ.ಕರಡೋಣಿ ಅವರನ್ನು ಗೌರವಿಸಿ ಮಾತನಾಡಿದ ಎಆರ್‌ಸಿ ಫೌಂಡೇಶನ್ ಅಧ್ಯಕ್ಷ ಅರುಣ ಚರಂತಿಮಠ, ಹತ್ತಕ್ಕೂ ಅಧಿಕ ಕೃತಿಗಳನ್ನು ಪ್ರಕಟಿಸಿದ ಅತ್ಯುತ್ತಮ ಲೇಖಕ, ವಾಗ್ಮಿ, ಕನ್ನಡದ ಏಳಿಗೆಗಾಗಿ ಹಲವಾರು ಸಂಶೋಧನಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಡಾ.ಕರಡೋಣಿ ಅವರು ಉತ್ತಮ ಆಡಳಿತಗಾರರೂ ಆಗಿದ್ದಾರೆ ಎಂದರು.

ಶಾಲೆಯ ಪ್ರಿನ್ಸಿಪಾಲ್ ಅಶ್ವಿನಿ ಚಿಕ್ಕಬಳ್ಳಾಪುರ ಮಾತನಾಡಿ ಶಾಲೆಯು ಭಾರತರತ್ನ ಸಿಎನ್‌ಆರ್ ರಾವ್ ಹಾಗೂ ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಹಿರಿಯ ವಿಜ್ಞಾನಿ ಡಾ.ಎ.ಎಸ್.ಕಿರಣಕುಮಾರ್ ಅವರಂತಹ ಮೇಧಾವಿಗಳ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದ ಎಂದರು.

ಕ್ರೀಡಾ ಜ್ಯೋತಿಯೊಂದಿಗೆ ನಡೆದ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ಗಮನಸೆಳೆಯಿತು. ಅತ್ಯುತ್ತಮ ಪಾರಿತೋಷಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಲೆಯ ಆಡಳಿತ ಮಂಡಳಿ ಸದಸ್ಯರು, ಪಾಲಕರು, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

P Views: 6
Headlines, ಮುಖ್ಯಾಂಶಗಳು, ರಾಷ್ರ್ಟೀಯ Tags:ಏಕಾಗ್ರತೆಯ ಕಠಿಣ ಪರಿಶ್ರಮದಿಂದ ಸಾಧನೆ ಸಾಧ್ಯ’.. ಲೀಲಾವತಿ ಚರಂತಿಮಠ ಪಬ್ಲಿಕ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿದ ಡಾ. ಕರಡೋಣಿ

Post navigation

Previous Post: ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ಅವರುದೀಪಾವಳಿ ಹಬ್ಬದ ಸಂದರ್ಭದಲ್ಲಿ ಬರೆದ ಆರದಿರಲಿ ಜ್ಯೋತಿ ಕವನ
Next Post: ಮಕ್ಕಳ ದಿನಾಚರಣೆ ನಿಮಿತ್ತ ಕಲಬುರಗಿ ಯ ಶಿಕ್ಷಕಿ ನಂದಿನಿ ಸನಬಾಲ್ ಅವರ ಬರಹ

Leave a Reply Cancel reply

Your email address will not be published. Required fields are marked *

Archives

  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ಸದನದ ಒಳಗಡೆ ಪರಿಷತ್ ಸದಸ್ಯರಿಂದ ಪ್ರತಿಭಟನೆ:ವೇತನ ಆಯೋಗ ಕುರಿತ ಅಪಡೆಟ್ ಸುದ್ದಿ ಇಲ್ಲಿದೆ ನೋಡಿ
  • ಪತಿಯ ಸಹಕಾರದಿಂದ ಕೂಲಿ ಕಾರ್ಮಿಕರ ಮಕ್ಕಳಿಗೆ ಅಕ್ಷರದ ಬೆಳಕು ಹರಿಸಿದ ಡಾ, ವೀಣಾ ಟಿ.
  • ಡಿಸೆಂಬರ್ 6 ಮಹಾ ಪರಿನಿರ್ವಾಣ ದಿನ ಆಚರಣೆ ಕುರಿತು ಶಿಕ್ಷಕಿ ನಂದಿನಿ ಸನಬಾಲ ಅವರ ಬರಹ
  • ಬೆಳಗಾವಿ ಚಳಿಗಾಲದ ಅಧೀವೇಶನದಲ್ಲಿ ಚರ್ಚೆಯಾಯಿತು ಏಳನೇ ವೇತನ ಆಯೋಗ ಹಾಗೂ ಓಪಿಎಸ್… ಪ್ರಶ್ನೇಗಳೇನು?ಸರ್ಕಾರ ಉತ್ತರವೇನು? ಇಲ್ಲಿದೆ ಮಾಹಿತಿ.
  • ಅನಿಲಕುಮಾರ ಪಾಟೀಲ ಅವರ ಮಗನ ಆರತಕ್ಷತೆಗೆ ಕ್ಷಣಗಣಣೆ!! ಸ್ಥಳಕ್ಕೆ ಭೇಟಿ ನೀಡಿದ ಹು_ಧಾ ಪೋಲಿಸ್ ಕಮಿಷನರ್

Copyright © 2023 Public Today.

Powered by PressBook WordPress theme