ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನಕ್ಕೆ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ಸಂಪೂರ್ಣ ಬೆಂಬಲ ಡಾ ||ಆರ್. ನಾರಾಯಣಸ್ವಾಮಿ ಚಿಂತಾಮಣಿ
*****************†*********
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ರಾಜ್ಯದ ಎಲ್ಲಾ ವೃಂದಸಂಘಗಳ ಸಹಯೋಗದಲ್ಲಿ ದಿನಾಂಕ :27:02:2024 ರಂದು ಬೆಂಗಳೂರು ಅರಮನೆ ಮೈದಾನದ ಕೃಷ್ಣಾ ವಿಹಾರ ಗೇಟ್ ನಂ-01 ರಲ್ಲಿ ಜರಗುತ್ತಿರುವ ಸರಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಹಾ ಸಮ್ಮೇಳನ ಯಶಸ್ವಿಗೊಳಿಸಬೇಕೆಂದು ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ನ ರಾಜ್ಯಾಧ್ಯಕ್ಷರಾದ ಡಾ:ಆರ್.ನಾರಾಯಣಸ್ವಾಮಿ ಚಿಂತಾಮಣಿ ಕೋರಿದ್ದಾರೆ..
ರಾಜ್ಯದ ವೃಂದಸಂಘಗಳ ರಾಜ್ಯಾಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು, ರಾಜ್ಯದ ಎಲ್ಲಾ ಪದಾಧಿಕಾರಿಗಳು, ಎಲ್ಲಾ ಜಿಲ್ಲಾ ಪದಾಧಿಕಾರಿಗಳು, ಎಲ್ಲಾ ತಾಲೂಕು ಪದಾಧಿಕಾರಿಗಳು ತಂಡಗಳನ್ನು ರಚಿಸಿಕೊಂಡು ಈಗಾಗಲೇ ಜಿಲ್ಲೆಗಳಾದ್ಯಂತ ಸಂಚರಿಸಿ ಸಮ್ಮೇಳನಕ್ಕೆ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಿಗಮ ಮಂಡಳಿಗಳ, ಸ್ಥಳೀಯ ಸಮಸ್ಯೆಗಳ, ಅನುದಾನಿತ ಶಾಲಾ ನೌಕರರಿಗೆ ಖುದ್ದು ಬೇಟಿ ಮಾಡಿ ಆಹ್ವಾನ ಪತ್ರಿಕೆಗಳನ್ನು ನೀಡಿ ಆಹ್ವಾನಿಸಿದ್ದಾಗಿದೆ.
ದಿನಾಂಕ 27.02.2024 ರಂದು ಮಂಗಳವಾರ ರಾಜ್ಯ ಸರಕಾರಿ ನೌಕರರ ಮಹಾ ಸಮ್ಮೇಳನಕ್ಕೆ ಹಾಜರಾಗುವ ಎಲ್ಲಾ ನೌಕರರು ಬೆಳಗ್ಗೆ 10: 00 ಘಂಟೆ ಒಳಗಾಗಿ ಉಪಹಾರ ಮುಗಿಸಿಕೊಂಡು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ 2-3 ಲಕ್ಷ ನೌಕರರು ಹಾಜರಿರುತ್ತಾರೆ*. *10:30ಕ್ಕೆ ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಕೃಷ್ಣ.ಎಸ್. ದೀಕ್ಷಿತ್ ಮತ್ತು ಖ್ಯಾತ ಹೃದ್ರೋಗ ತಜ್ಞರಾದ ಡಾಕ್ಟರ್ ಸಿ.ಎನ್. ಮಂಜುನಾಥ್ ರವರು, ಕರ್ನಾಟಕ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ಮೇಡಂ ರವರು ಕಾರ್ಯಗಾರದಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. 11:30ಕ್ಕೆ ಗೌರವಾನ್ವಿತ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರಿಂದ ಕಾರ್ಯಕ್ರಮ ಉದ್ಘಾಟನೆ ಮಾಡಿ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ರವರು ಕಾರ್ಯಕ್ರಮದಲ್ಲಿ ನೌಕರರ ಪರ ಆಶಯ ನುಡಿಗಳನ್ನಾಡಲಿದ್ದಾರೆ. ಈ ಸಮ್ಮೇಳನಕ್ಕೆ ಕರ್ನಾಟಕ ಸರ್ಕಾರದ ಎಲ್ಲಾ ಸಚಿವರುಗಳು ಉಪಸ್ಥಿತರಿರುತ್ತಾರೆ. ಈ ಮಹಾ ಸಮ್ಮೇಳನದ ಅಧ್ಯಕ್ಷತೆಯನ್ನು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಮಾನ್ಯ ಸಿ.ಎಸ್. ಷಡಕ್ಷರಿ ರವರು ವಹಿಸುವರು. ಮಹಾ ಸಮ್ಮೇಳನಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ 1500 ಬಸ್ ಗಳಿಗೆ ಪ್ರತ್ಯೇಕವಾಗಿ ಸರ್ಕಸ್ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ದ್ವಿ ಚಕ್ರ ವಾಹನಗಳಿಗೆ ಮತ್ತು ಲಘು ವಾಹನಗಳಿಗೆ ತ್ರಿಪುರ ವಾಸಿನಿ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆಯ ಕಲ್ಪಿಸಲಾಗಿದೆ. ಆದ್ದರಿಂದ ನಮ್ಮ ಹಕ್ಕು, ನೆಮ್ಮದಿಯ ಬದುಕಿಗಾಗಿ (1) 7ನೇ ವೇತನ ಆಯೋಗದ ವರದಿಯ ಅನುಷ್ಠಾನ.
(2) ಹಳೇ ಪಿಂಚಣಿ ಯೋಜನೆ ಮರು ಜಾರಿ
(3)ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆ
ಈ ಎಲ್ಲಾ ಬೇಡಿಕೆಗಳು ಈಡೇರಬೇಕಾಗಿರುವುದರಿಂದ ನಮ್ಮೆಲ್ಲರ ಚಿತ್ತ ಸರಕಾರದತ್ತ ರಾಜ್ಯದ ಸಮಸ್ತ ನೌಕರರು ಬನ್ನಿ ಭಾಗವಹಿಸಿ ಈ ಮಹಾ ಸಮ್ಮೇಳನ ಯಶಸ್ವಿಗೊಳಿಸಿ.
ಮಹಾಸಮ್ಮೇಳನದಲ್ಲಿ ಭಾಗವಹಿಸುವವರಿಗೆ ರಾಜ್ಯದ ಎಲ್ಲಾ ತಾಲೂಕ್ ಗಳಿಂದ ಉಚಿತ ಬಸ್ ವ್ಯವಸ್ಥೆ ಹಾಗೂ ಬೆಂಗಳೂರು ವಿಭಾಗದ ಜಿಲ್ಲೆಗಳ ನೌಕರರಿಗೆ ಒಂದು ದಿನದ ವಿಶೇಷ ಸಂದರ್ಭಿಕ ರಜೆ ಇತರೆ ವಿಭಾಗಗಳ ಜಿಲ್ಲೆಗಳ ನೌಕರರಿಗೆ ಎರಡು ದಿನಗಳ ವಿಶೇಷ ಸಾಂದರ್ಭಿಕ ರಜೆ ಸೌಲಭ್ಯಕ್ಕೆ ಹಾಜರಾದ ಪ್ರತಿಯೊಬ್ಬರು ಹಾಜರಾತಿ ಪತ್ರ ಪಡೆಯಬಹುದಾಗಿದೆ. ಆದ್ದರಿಂದ ರಾಜ್ಯದ ಶಿಕ್ಷಕರ ಸಂಘಗಳ ಪರಿಷತ್ ನ ಸಂಪೂರ್ಣ ಬೆಂಬಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನಕ್ಕೆ ನೀಡಿ ವೃಂದ ಸಂಘಗಳ ರಾಜ್ಯಾಧ್ಯಕ್ಷರುಗಳು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಪ್ರಧಾಧಿಕಾರಿಗಳು, ಎಲ್ಲಾ ಜಿಲ್ಲಾಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು, ರಾಜ್ಯದ ಎಲ್ಲಾ ತಾಲೂಕು ಅಧ್ಯಕ್ಷರುಗಳು ಕಾರ್ಯದರ್ಶಿಗಳು, ತಾಲೂಕು ಪದಾಧಿಕಾರಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೆ.ಎಸ್.ಎಸ್.ಪಿ ರಾಜ್ಯಾಧ್ಯಕ್ಷರಾದ ಡಾ ||ಆರ್. ನಾರಾಯಣಸ್ವಾಮಿ ಚಿಂತಾಮಣಿ ಕೋರಿದ್ದಾರೆ.
ಬನ್ನಿ ಭಾಗವಹಿಸಿ ನೌಕರರ ಮಹಾ ಸಮ್ಮೇಳನ ಯಶಸ್ವಿಗೊಳಿಸಿ