ಕೃಷಿ ಹೊಂಡದಲ್ಲಿ ಮುಳುಗುತ್ತಿದ್ದ ತನ್ನ ಇಬ್ಬರು ಮಕ್ಕಳನ್ನು ರಕ್ಷಿಸಲು ಹೋಗಿ ಶಿಕ್ಷಕ ಕಲ್ಲಪ್ಪ ಗಾಣಿಗೇರ ಸೇರಿದಂತೆ ಇಬ್ಬರು ಮಕ್ಕಳ ದಾರುಣ ಸಾವು…!!
ಶಾಲೆಗಳಿಗೆ ರಜೆ ಹಿನ್ನಲೆ ತಮ್ಮ ಜಮೀನಿಗೆ ತೆರಳಿದ್ದ ಶಿಕ್ಷಕ ಕಲ್ಲಪ್ಪ ಗಾಣಿಗೇರ..
ಬೆಳಗಾವಿ: ಇವತ್ತು ಭಾನುವಾರ ಆಗಿದ್ದರಿಂದ ಶಾಲೆಗಳಿಗೆ ರಜೆ ನೀಡಲಾಗಿತ್ತು.. ಈ ಹಿನ್ನಲೆಯಲ್ಲಿ ತಮ್ಮ ಮಕ್ಕಳನ್ನು ಕರೆದುಕೊಂಡು ತಮ್ಮ ಜಮಿನಿಗೆ(ಗದ್ದೆಗೆ) ತೆರಳಿದ್ದ ಶಿಕ್ಷಕ ಕಲ್ಲಪ್ಪ ಗಾಣಿಗೇರ (ವಯಸ್ಸು ೩೬) ಹಾಗೂ ಮಕ್ಕಳಾದ ಮನೋಜ(ವಯಸ್ಸು೧೧)ಮದನ(ವಯಸ್ಸು ೯) ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ..
ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಶಿಕ್ಷಕರಾಗಿದ್ದ ಕಲ್ಲಪ್ಪ ಶಾಲೆಗೆ ರಜೆ ಇದ್ದಿದ್ದರಿಂದ ನಿಡಗುಂದಿ ಗ್ರಾಮದ ಜಮೀನಿಗೆ ತೆರಳಿದ್ದರು. ಕೃಷಿ ಹೊಂಡದಲ್ಲಿ ಮುಳುಗುತ್ತಿರುವ ತಮ್ಮ ಮಕ್ಕಳನ್ನು ರಕ್ಷಿಸಲು ಹೋಗಿ ಶಿಕ್ಷಕ ಕಲ್ಲಪ್ಪ ಕೂಡ ಸಾವನ್ಬಪ್ಪಿದ್ದಾರೆ…
ಸ್ಥಳಕ್ಕೆ ರಾಯಬಾಗ ಪೋಲಿಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.ಮತ್ತಷ್ಟು ಮಾಹಿತಿ ನೀರಿಕ್ಷಿಸಲಾಗಿದೆ..