ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ಕುಂದಗೋಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಸಭೆಯನ್ನು ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿತ್ತು..
ಹುಬ್ಬಳ್ಳಿಯ ಅರವಿಂದನಗರ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಕುಂದಗೋಳ ಶಾಸಕ ಎಮ್ ಆರ್ ಪಾಟೀಲ ಸೇರಿದಂತೆ ನೂರಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಂಡಿದ್ದರು..
ಬಿಜೆಪಿ ಪಕ್ಷದ ಕಚೇರಿ ಕೇಳ ಮಹಡಿಯಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಊಟಕ್ಕಾಗಿ ಕಾರ್ಯಕರ್ತರು ಜಗಳ ಮಾಡಿಕೊಂಡ ಘಟನೆ ನಡೆದಿದೆ..ಜೋಶಿ ಅವರು ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.. ಮೋದಲೆ ಊಟ ಮಾಡಬೇಡಿ ಎಂದು ಕಾರ್ಯಕರ್ತರು ಹೇಳಿದ್ರು ಎಂದು ತಿಳಿದು ಬಂದಿದೆ..ನಾ ಮುಂದು ನೀ ಮುಂದು ಎಂಬಂತೆ ಬಿಜೆಪಿ ಕಾರ್ಯಕರ್ತರು ಮೂಗಿ ಬಿದ್ದು ಊಟ ಮಾಡಿದ್ರು..
ಕೈನಲ್ಲಿ ಊಟದ ಪ್ಲೆಟ್ ಹಿಡಿದುಕೊಂಡು ಕಾರ್ಯಕರ್ತರು ಪರಸ್ಪರ ವಾಗ್ವಾದಕ್ಕೆ ಇಳಿದಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಏಕಾಏಕಿ ನೂರಕ್ಕೂ ಅಧಿಕ ಕಾರ್ಯಕರ್ತರು ಊಟಕ್ಕೆ ಬಂದಿದ್ದರಿಂದ ಆಯೋಜಕರಿಗೆ ತಲೆನೋವಾಗಿ ಪರಿಣಮಿಸಿದೆ..
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕ ಎಮ್ ಆರ್ ಪಾಟೀಲ ಅವರೆ ಸ್ಥಳಕ್ಕೆ ಆಗಮಿಸಿ ಕಾರ್ಯಕರ್ತರ ನಡುವಿನ ಗೊಂದಲ ನಿವಾರಣೆ ಮಾಡಿದ್ರು..
ಮಹಿಳೆಯರಿಗೆ ಮೊದಲನೆ ಮಹಡಿಯಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು