ದಕ್ಷಿಣ ಕನ್ನಡದಲ್ಲಿ ಇವತ್ತು ಸಾರ್ವತ್ರಿಕ ರಜೆ!! ಉಳಿದ ಜಿಲ್ಲೆಗಳಿಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ..
ಒಂದು ದಿನ ಸಾರ್ವತ್ರಿಕ ರಜೆ ಘೊಷಣೆ ಮಾಡಿದ ರಾಜ್ಯ ಸರ್ಕಾರ..
ಬೆಂಗಳೂರು : ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ 11.04,2024 ರ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ..
ರಾಜ್ಯ ಸರ್ಕಾರವು ಈ ಕುರಿತು ಆದೇಶ ಹೊರಡಿಸಿದ್ದು,ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ 11.04,2024 ರ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖುತುಬ್-ಎ-ರಂಜಾನ್ ಹಬ್ಬದ ಸಾರ್ವತಿಕ ರಜೆಯನ್ನು 11.04.2024 10.04.2024 ರಂದು ನೀಡುವ ಕುರಿತು ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯಿಸುವಂತೆ ಖುತುಬ್-ಎ-ರಂಜಾನ್ ಹಬ್ಬದ ರಜೆಯನ್ನು ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ 11.04.2024 ಬದಲಿಗೆ ದಿನಾಂಕ: 10.04.2024ರಂದು ಸಾರ್ವತ್ರಿಕ ರಜೆ ಘೋಷಿಸಲು ತಮ್ಮ ಹಂತದಲ್ಲಿಯೇ ವಿಯಮಾನುಸಾರ ತೀರ್ಮಾನ ತೆಗೆದುಕೊಳ್ಳುವಂತೆ ತಿಳಿಸಲು ನಿರ್ದೇಶಿಸಲಾಗಿದೆ.