ಶಿಕ್ಷಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕನಿಗೆ 1 ಲಕ್ಷ ರೂಪಾಯಿ ಪರಿಹಾರ!
ರಾಜ್ಯದಲ್ಲಿ ಮೋದಲ ಬಾರಿಗೆ ಇಂತಹ ಪ್ರಕರಣ ಬೆಳಕಿಗೆ.
ಯಾವ ಜಿಲ್ಲೆ? ಏನಿದು ಪ್ರಕರಣ ನೀವೆ ನೊಡಿ..
ಚಾಮರಾಜನಗರ, ಏಪ್ರಿಲ್, 18: ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕನಿಗೆ ಸಮಾಜ ಕಲ್ಯಾಣ ಇಲಾಖೆಯು 1 ಲಕ್ಷ ರೂಪಾಯಿ ಪರಿಹಾರವನ್ನು ಕೊಟ್ಟಿದ್ದು, ಇದು ಬಾಲಕನಿಗೆ ಪೋಕ್ಸೊ ಅಡಿ ಕೊಟ್ಟ ಮೊದಲ ಪರಿಹಾರವಾಗಿದೆ.
ಕೆಲವು ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಶಿಕ್ಷಣ ಸಂಸ್ಥೆಯ ಶಿಕ್ಷಕ ಅರುಣ್ ಕುಮಾರ್ ಎಂಬಾತ SSLC ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ ನೀಡಿ ಲೈಂಗಿಕವಾಗಿ ಬಳಸಿಕೊಂಡಿದ್ದರು.
ನೊಂದ ಬಾಲಕನು ಈ ಸಂಬಂಧ ದೂರು ಕೊಟ್ಟು ಅಳಲು ತೋಡಿಕೊಂಡಿದ್ದ ಬಳಿಕ ಶಿಕ್ಷಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತ ಬಾಲಕನಿಗೆ ಪರಿಹಾರ ನೀಡಿದ ಪ್ರಕರಣ ರಾಜ್ಯದಲ್ಲೇ ಇದೇ ಮೊದಲು ಎಂದು ಹೇಳಲಾಗಿದೆ. ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ತರಾದವರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಹಾರ ನೀಡಲು ಅವಕಾಶವಿದೆ. ಹೀಗಾಗಿ ಬಾಲಕನ ಕುಟುಂಬಕ್ಕೆ ಪರಿಹಾರದ ಚೆಕ್ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಉಪನಿರ್ದೇಶಕ ಮಲ್ಲಿಕಾರ್ಜುನ ತಿಳಿಸಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚು ಬಾಲಕಿಯರು ಸಂತ್ರಸ್ಥೆಯಾಗಿರುತ್ತಾರೆ. ಈ ಪ್ರಕರಣದಲ್ಲಿ ಬಾಲಕ ಸಂತ್ರಸ್ಥನಾಗಿದ್ದಾನೆ.